ಸತ್ಯಮೇವ ಜಯತೆ : ಯತ್ನಾಳ್ ಟ್ವೀಟ್
ವಿಜಯಪುರ, 26 ಮಾರ್ಚ್ (ಹಿ.ಸ.) : ಆಂಕರ್ : ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನ ದೈನ್ಯಂ, ನ ಪಲಾಯನಂ, ಸತ್ಯಮೇವ ಜಯತೆ ಎಂದು ಎಕ್ಸ್​​ನಲ್ಲಿ ಟ್ವೀಟ್ ಮಾಡಿದ್ದಾರೆ. ಸತ್ಯವಂತರಿಗಿದು ಕಾಲವಲ್ಲ ದುಷ್ಟ ಜ
Mla yatnal x tweet


ವಿಜಯಪುರ, 26 ಮಾರ್ಚ್ (ಹಿ.ಸ.) :

ಆಂಕರ್ : ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಶಾಸಕ ಬಸನಗೌಡ ಪಾಟೀಲ್

ಯತ್ನಾಳ್, ನ ದೈನ್ಯಂ, ನ ಪಲಾಯನಂ, ಸತ್ಯಮೇವ ಜಯತೆ ಎಂದು ಎಕ್ಸ್​​ನಲ್ಲಿ ಟ್ವೀಟ್ ಮಾಡಿದ್ದಾರೆ.

ಸತ್ಯವಂತರಿಗಿದು ಕಾಲವಲ್ಲ

ದುಷ್ಟ ಜನರಿಗೆ ಸುಭಿಕ್ಷಕಾಲ

ಉಪಕಾರ ಮಾಡಿದರೆ ಅಪಕರಿಸುವ ಕಾಲ

ಸಕಲವು ತಿಳಿದವಗೆ ದುರ್ಭಿಕ್ಷ ಕಾಲ.

ಧರ್ಮ ಮಾಡುವವರಿಗೆ ನಿರ್ಮೂಲವಾಗುವ ಕಾಲ

ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ

ಸತ್ಯವಂತರಿಗಿದು ಕಾಲವಲ್ಲ ಎಂದು ಪೋಸ್ಟ್​ ಹಾಕಿದ್ದಾರೆ. ಇನ್ನು, ಪ್ರತಿನಿತ್ಯ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಬಸನಗೌಡ ಪಾಟೀಲ್​ ಯತ್ನಾಳ್​ ಕಚೇರಿ ಖಾಲಿ ಖಾಲಿಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande