ಏಪ್ರಿಲ್ 23 ರಂದು ಜನ ಸಂಪರ್ಕ ಸಭೆ
ರಾಯಚೂರು, 19 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಲೋಕಾಯುಕ್ತ, ರಾಯಚೂರು ಘಟಕದ ವತಿಯಿಂದ ಪೆÇಲೀಸ್ ಅಧೀಕ್ಷಕರಾದ ಸತೀಶ್ ಎಸ್. ಚಿಟಗುಬ್ಬಿ ಅವರ ಮಾರ್ಗದರ್ಶನದಲ್ಲಿ ಏಪ್ರಿಲ್ 23ರಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ, ತಹಶೀಲ್ ಕಚೇರಿ ಎದುರುಗಡೆ ಬೆಳಿಗ್ಗೆ 11 ಗಂಟೆಯಿಂದ
ಏಪ್ರಿಲ್ 23 ರಂದು ಜನ ಸಂಪರ್ಕ ಸಭೆ


ರಾಯಚೂರು, 19 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಲೋಕಾಯುಕ್ತ, ರಾಯಚೂರು ಘಟಕದ ವತಿಯಿಂದ ಪೆÇಲೀಸ್ ಅಧೀಕ್ಷಕರಾದ ಸತೀಶ್ ಎಸ್. ಚಿಟಗುಬ್ಬಿ ಅವರ ಮಾರ್ಗದರ್ಶನದಲ್ಲಿ ಏಪ್ರಿಲ್ 23ರಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ, ತಹಶೀಲ್ ಕಚೇರಿ ಎದುರುಗಡೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಿದ್ದು. ಯಾವುದೇ ರೀತಿಯ ಸಾರ್ವಜನಿಕ ಸಮಸ್ಯೆ, ಹಗರಣ ಅಥವಾ ದೂರುಗಳನ್ನು ಹೊಂದಿರುವವರು ಈ ದಿನಾಂಕ ಮತ್ತು ಸ್ಥಳದಲ್ಲಿ ಹಾಜರಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪೆÇಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande