ಮೊಬೈಲ್ ವ್ಯಾಮೋಹ ತೊರೆದು ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಶಂಕರಪ್ಪ ಕರೆ
ಮೊಬೈಲ್ ವ್ಯಾಮೋಹ ತೊರೆದು ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಶಂಕರಪ್ಪ ಕರೆ
ಕೋಲಾರ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆರಂಭವಾದ ಕ್ರೀಡಾ ಶಿಬಿರವನ್ನು ವಕೀಲ ಕೆ.ವಿ.ಶಂಕರಪ್ಪ ಉದ್ಘಾಟಿಸಿದರು.


ಕೋಲಾರ, ೧೦ ಮೇ (ಹಿ.ಸ) :

ಆ್ಯಂಕರ್ : ಮಕ್ಕಳು ಮೈದಾನದಲ್ಲಿ ಆಟವಾಡಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಂಡ ಉದಾಹರಣೆಗಳಿವೆ. ಇಂದು ಮಕ್ಕಳು ಮೊಬೈಲ್ ವ್ಯಾಮೋಹವನ್ನು ಬಿಟ್ಟು ಕ್ರೀಡೆಗೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹಿರಿಯ ವಕೀಲ ಕೆ.ವಿ ಶಂಕರಪ್ಪ ತಿಳಿಸಿದರು

ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶನಿವಾರ ಕೋಲಾರ ಖೋ-ಖೋ ಸಂಸ್ಥೆಯ ವತಿಯಿಂದ ಒಂದು ತಿಂಗಳ ಕಾಲ ನಡೆಯಲಿರುವ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಮೊಬೈಲ್‌ನಲ್ಲಿ ಆಟ ಆಡುವುದನ್ನು ನಿಲ್ಲಿಸಿ ಮೈದಾನದಲ್ಲಿ ಆಟವಾಡಲು ಪ್ರೋತ್ಸಾಹಿಸಬೇಕು. ಅಂದಾಗ ಮಕ್ಕಳ ಆರೋಗ್ಯ ವೃದ್ಧಿಯಾಗಲು ಸಾಧ್ಯ. ಕ್ರೀಡೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.

ಮನುಷ್ಯನ ಸೋಮಾರಿತನ ಬಿಟ್ಟಾಗ ಮಾತ್ರವೇ ಯಶಸ್ಸು ಕಾಣಲು ಸಾಧ್ಯ ಇವತ್ತು ದಾನಿಗಳ ಸಹಾಯ ಪೋತ್ಸಾಹದಿಂದ ಶಿಬಿರ ನಡೆಯುತ್ತಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು ಮಕ್ಕಳಿಗೆ ಆಹಾರ ಪದ್ದತಿಗಳನ್ನು ಅನುಸರಿಸಲು ಸಲಹೆ ನೀಡಿದರು,

ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಮಾತನಾಡಿ ಕ್ರೀಡೆಯಲ್ಲಿ ಯಶಸ್ಸು ಗಳಿಸಿದಾಗ ಸರ್ಕಾರಿ ಹುದ್ದೆಗಳು ಲಭ್ಯವಿದೆ ಸದೃಢ ದೇಹದಲ್ಲಿ ಸದೃಢ ಮನಸ್ಸಿನಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಎಲ್ಲರೂ ಗೌರವಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಸುರೇಶ್ ಸೂರಿ, ರಘು(ಚಿಟ್ಟಿ), ರೈತ ಸಂಘದ ಅಬ್ಬಣಿ ಶಿವಪ್ಪ, ಶ್ರೀಧರ್, ಜಗನ್ನಾಥ್ ಭಾಗವಹಿಸಿದ್ದರು.

ಚಿತ್ರ : ಕೋಲಾರ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆರಂಭವಾದ ಕ್ರೀಡಾ ಶಿಬಿರವನ್ನು ವಕೀಲ ಕೆ.ವಿ.ಶಂಕರಪ್ಪ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande