ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ
ದಾವಣಗೆರೆ, 18 ಮೇ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಏಕ ವ್ಯಕ್ತಿ ವಿಚಾರಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ನೇತೃತ್ವದಲ್ಲಿ ನಡೆಯುತ್ತಿರುವ ಸಮೀಕ್ಷೆಯ ಅವಧಿಯನ್ನು ಮೇ 25ರ ತನಕ ವಿಸ್ತರಿಸಲಾಗಿದೆ. ಸಮೀಕ್ಷೆ ವೇಳೆ ಉದ್ಭವಿಸಿದ ತೊಂದರೆಗಳನ್ನು ಲೆಕ್ಕದ
ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ ಅವಧಿ ವಿಸ್ತರಣೆ


ದಾವಣಗೆರೆ, 18 ಮೇ (ಹಿ.ಸ.) :

ಆ್ಯಂಕರ್ : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಏಕ ವ್ಯಕ್ತಿ ವಿಚಾರಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ನೇತೃತ್ವದಲ್ಲಿ ನಡೆಯುತ್ತಿರುವ ಸಮೀಕ್ಷೆಯ ಅವಧಿಯನ್ನು ಮೇ 25ರ ತನಕ ವಿಸ್ತರಿಸಲಾಗಿದೆ. ಸಮೀಕ್ಷೆ ವೇಳೆ ಉದ್ಭವಿಸಿದ ತೊಂದರೆಗಳನ್ನು ಲೆಕ್ಕದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮೇ 26 ರಿಂದ 28ರ ವರೆಗೆ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಲಾಗಿದೆ. ಈ ಅವಧಿಯಲ್ಲಿ ಆನ್‌ಲೈನ್ ಸ್ವಯಂ ಘೋಷಣೆಯ ಅಂತಿಮ ದಿನವೂ ಮೇ 28 ಆಗಿರುತ್ತದೆ. ಸಮೀಕ್ಷೆಯಲ್ಲಿ ಕೈಬಿಟ್ಟ ಕುಟುಂಬಗಳು ಶಿಬಿರಗಳಿಗೆ ಹಾಜರಾಗುವ ಮೂಲಕ ಸಮೀಕ್ಷೆಗೆ ಸಹಕರಿಸಬೇಕು ಎಂದು ದಾವಣಗೆರೆ ಜಿಲ್ಲೆಯ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande