ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿ ಮತ್ತೆ ಕೊವಿಡ್ ಆತಂಕ ತಲೆಎತ್ತಿದ್ದು, ಇಂದು ಬೆಂಗಳೂರು ನಗರದ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ 2 ಹೊಸ ಪ್ರಕರಣಗಳು ದೃಢಪಟ್ಟಿವೆ. 45 ಮತ್ತು 38 ವರ್ಷದ ಇಬ್ಬರು ವ್ಯಕ್ತಿಗಳಿಗೆ ಸೋಂಕು ದೃಢಪಟ್ಟಿದ್ದು, ಇವರಿಗೆ ಯಾವುದೇ ಪ್ರಯಾಣ ಇತಿಹಾಸವಿಲ್ಲ.
ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಈ ಪೈಕಿ 32 ಪ್ರಕರಣಗಳು ಬೆಂಗಳೂರಿನಲ್ಲಿವೆ.
ಸೋಂಕಿತರು ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿಎಉವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa