ಬಳ್ಳಾರಿ, 28 ಮೇ (ಹಿ.ಸ.) :
ಆ್ಯಂಕರ್ : ನರೇಗಾ ಯೋಜನೆಯಡಿ ಕೆಲಸ ಮಾಡಿದ ಕೂಲಿ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಎಐಕೆಕೆಎಂಎಸ್ ರೈತ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿಯ ಮುಂದೆ ಬುಧವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಭೇಟಿ ಮಾಡಿ, ನರೇಗಾ ಅಡಿಯಲ್ಲಿ ಕೂಲಿ ಕೆಲಸ ಮಾಡಿರುವವರಿಗೆ ಕಳೆದ ಮೂರು ತಿಂಗಳಿನಿಂದ ಹಣ ಪಾವತಿಯಾಗಿಲ್ಲ. ಅಲ್ಲದೇ, ಸಿಬ್ಬಂದಿಗೂ ಗೌರವಧನ ಪಾವತಿಯಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಕುಟುಂಬ ನಿರ್ವಹಣೆ ಸಂಕಷ್ಟಕ್ಕೆ ಒಳಗಾಗುತ್ತಿದೆ ಎಂದು ವಿವರಿಸಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವರುಗಳಿಗೆ ಮನವಿ ಸಲ್ಲಿಸಿದಾಗ, ಮೇ 30 ಮತ್ತು 31 ರಂದು
ಮುಖ್ಯಮಂತ್ರಿಗಳ ಜೊತೆ ನಡೆಯುವ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪ ಮಾಡುವುದಾಗಿ ಭರವಸೆ ನೀಡಿದರು.
ಈ ಹೋರಾಟದಲ್ಲಿ ನೂರಾರು ಜನ ರೈತರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್