ಪ್ರಜಾ ಸೌಧ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ಪತ್ರ - ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ, 30 ಮೇ (ಹಿ.ಸ.) : ಆ್ಯಂಕರ್ : ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟದ ನಿರ್ಣಯದಂತೆ ರಾಜ್ಯ ಸರ್ಕಾರ ಕಲಬುರಗಿ ಜಿಲ್ಲೆಯ ಮೂರು ನೂತನ ತಾಲೂಕುಗಳಲ್ಲಿ ಪ್ರಜಾಸೌಧಗಳ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ಪತ್ರನೀಡಿದೆ. ಇದು ಕಲಬುರಗಿ ಜಿಲ್ಲೆಗೆ ನೀಡಿದ ಭರವಸೆ ಈಡೇರಿದಂತಾಗಿದೆ ಎಂದು ಗ್ರಾಮೀಣಾಭಿವೃದ್
ಕಲಬುರಗಿ ಜಿಲ್ಲೆಯ ನೂತನ ಮೂರು ತಾಲೂಕುಗಳಲ್ಲಿ ಪ್ರಜಾ ಸೌಧ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ಪತ್ರ - ಸಚಿವ ಪ್ರಿಯಾಂಕ್ ಖರ್ಗೆ.


ಕಲಬುರಗಿ, 30 ಮೇ (ಹಿ.ಸ.) :

ಆ್ಯಂಕರ್ : ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟದ ನಿರ್ಣಯದಂತೆ ರಾಜ್ಯ ಸರ್ಕಾರ ಕಲಬುರಗಿ ಜಿಲ್ಲೆಯ ಮೂರು ನೂತನ ತಾಲೂಕುಗಳಲ್ಲಿ ಪ್ರಜಾಸೌಧಗಳ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ಪತ್ರನೀಡಿದೆ. ಇದು ಕಲಬುರಗಿ ಜಿಲ್ಲೆಗೆ ನೀಡಿದ ಭರವಸೆ ಈಡೇರಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು ಕಳೆದ ವರ್ಷ ಸಪ್ಟೆಂಬರ್ 17 ರಂದು ಕಲಬುರಗಿ ಯಲ್ಲಿ ನಡೆದ ಸಚಿವ ಸಂಪುಟದ ನಿರ್ಣಯದಂತೆ ಕಲಬುರಗಿ ಜಿಲ್ಲೆಯ ಕಾಳಗಿ, ಯಡ್ರಾಮಿ, ಕಮಲಾಪುರ, ಶಹಾಬಾದ ತಾಲೂಕು ಆಡಳಿತಗಳಿಗೆ ಸುಸಜ್ಜಿತ ಹಾಗೂ ಸುವ್ಯವಸ್ಥಿತವಾದ “ಪ್ರಜಾಸೌಧ“ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿಗಳಾದ ಫೌಜಿಯಾ ತರನ್ನುಮ್ ಅವರಿಗೆ ಹಸ್ತಾಂತರಿಸಿದರು ಎಂದು ತಿಳಿಸಿದ್ದಾರೆ.

ಪ್ರತಿ ಪ್ರಜಾಸೌಧ ನಿರ್ಮಾಣಕ್ಕೆ ತಲಾ ರೂ 8.60 ಕೋಟಿ ತೆಗೆದಿರಿಸಲಾಗಿದೆ. ಕಲಬುರಗಿ ಜಿಲ್ಲೆಯ ತಾಲೂಕು ಆಡಳಿತಗಳ ಅನುಕೂಲಕ್ಕೆ ಮಹತ್ವದ ಪ್ರಜಾಸೌಧ ಕಟ್ಟಡಗಳನ್ನು ಒದಗಿಸಿದ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಒಂದೇ ಸೂರಿನ ಅಡಿಯಲ್ಲಿ ಎಲ್ಲಾ ಸರ್ಕಾರಿ ಸೇವೆಗಳನ್ನು ಒದಗಿಸುವಂತಹ ಸುಸಜ್ಜಿತ ಕಟ್ಟಡಗಳು ದೊರಕಿದಾಗ ಜನತೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande