ಗದಗ, 31 ಮೇ (ಹಿ.ಸ.) :
ಆ್ಯಂಕರ್ : ಮುಕ್ತ ಮಾರುಕಟ್ಟೆ ಬೆಲೆಗಳಿಗಿಂತ ಪ್ರತಿಶತ 50 ರಿಂದ 90 ರಷ್ಟು ಅಗ್ಗದ ದರದಲ್ಲಿ ಔಷಧಿ ಲಭ್ಯವಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸುವ ಆದೇಶ ಹೊರಡಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಆರೋಪಿಸಿದರು.
ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕ, ಗದಗ ನಗರ ಹಾಗು ಗದಗ ಗ್ರಾಮೀಣ ಮಂಡಲ ವತಿಯಿಂದ ಇಂದು ಜಿಲ್ಲಾ ಆಸ್ಪತ್ರೆ ಮುಂದೆ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡುತ್ತಿದ್ದರು. ರೋಗ ಯಾವುದೇ ಇರಲಿ ಪೂರೈಕೆಯಲ್ಲಿರುವ ಔಷಧಿಯನ್ನೇ ವೈದ್ಯರು ಬರೆದು ಕೊಡುವ ಅನಿವಾರ್ಯ ಪರಸ್ಥಿತಿಯನ್ನ ಸರ್ಕಾರ ನಿರ್ಮಾಣ ಮಾಡಿದೆ. ಅವಶ್ಯಕ ಔಷಧಿಗಳನ್ನ ಬೇಡಿಕೆ ತಕ್ಕಂತೆ ಒದಗಿಸಿದೆ ಒಂದೇ ತರನಾದವುಗಳನ್ನ ಪೂರೈಸುತ್ತಿರುವದು ದುರ್ದೈವದ ಸಂಗತಿ ಆಗಿದೆ ಹೀಗಾದರೆ ರೋಗಿಯ ಕಾಯಿಲೆ ವಾಸಿಯಾಗುವದಾದರೂ ಹೇಗೆ ಎಂದು ಆತಂಕ ವ್ಯೆಕ್ತಪಡಿಸಿದರು.
ಜನೌಷಧಿ ಕೇಂದ್ರಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸ್ವಾಮ್ಯದ ಸಂಸ್ಥೆಗಳೆ ಔಷಧಿ ಪೂರೈಸುತ್ತಿದ್ದು ವಿಶ್ವ ಆರೋಗ್ಯ ಸಂಸ್ಥೆಯಿಂದಲೂ ಪ್ರಮಾಣಿಕೃತವಾಗಿವೆ. ಮಧುಮೇಹ, ಹೃದಯ ಸಂಬಂಧಿ ಮುಂತಾದ ದೀರ್ಘ ಅವಧಿ ಕಾಯಿಲೆಗಳ ಔಷಧಿಗಳನ್ನ ಸರ್ಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ವಿತರಣೆ ಆಗದಿದ್ದಾಗ ರೋಗಿಯು ಅಗ್ಗದ ದರದಲ್ಲಿ ಜನೌಷಧಿ ಕೇಂದ್ರಗಳಲ್ಲಿ ಖರೀದಿಸುತ್ತಾರೆ. ಆಸ್ಪತ್ರೆಗಳಲ್ಲಿ ಎಲ್ಲಾ ಔಷಧಿ ಸಿಗುವಂತೆ ಸರ್ಕಾರ ಕ್ರಮ ಕೈಗೊಳ್ಳಲಿ ಜೊತೆಗೆ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸಬಾರದು ಎಂದು ಶಾಸಕ ಚಂದ್ರು ಲಮಾಣಿ ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ ಮಾತನಾಡಿ ಜನಹಿತವನ್ನ ಕಾಪಾಡಬೇಕಾದ ಸರ್ಕಾರವೇ ಜನರ ರಕ್ತ ಹೀರುತ್ತಿರುವದು ತುಂಬಾ ನಾಚಿಕೆ ಸಂಗತಿ. ಸರ್ಕಾರಿ ಆಸ್ಪತ್ರೆಗಳಿಗೆ ಬರುವವರು ಹೆಚ್ಚಾಗಿ ಬಡವರು, ಆರ್ಥಿಕ ಅನಕೂಲ ಇಲ್ಲದವರು, ಅಂತವರ ಭವಣೆ ಅರಿತ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 16 ವರ್ಷಗಳ ಹಿಂದೆಯೇ ಇಂತಹ ಯೋಜನೆಯನ್ನು ಜಾರಿಗೆ ತಂದಿದ್ದು ದೇಶದಾದ್ಯoತ ಹದಿನೈದು ಸಾವಿರಕ್ಕಿಂತಲೂ ಹೆಚ್ಚು ಕೇಂದ್ರಗಳು ತೆರೆಯಲ್ಪಟ್ಟಿವೆ. ಕೋಟ್ಯಾoತರ ಜನರಿಗೆ ಇದರ ಸದುಪಯೋಗವಾಗಿದೆ. ಮೊದಲಿನಂತೆ ಜನೌಷಧಿ ಕೇಂದ್ರ ಪ್ರಾರಂಭಿಸಬೇಕು ಎಂದು ಹೇಳಿದರು.
ನಿಗಮ ಮಂಡಳಿ ಮಾಜಿ ಅಧ್ಯಕ್ಷ ಎಂ ಎಸ್ ಕರಿಗೌಡ್ರ ಮಾತನಾಡಿ ಔಷಧಿ ಲಾಭಿಗೆ ಮಣಿದ ರಾಜ್ಯ ಸರ್ಕಾರ ಹಣ ಮಾಡಿಕೊಳ್ಳುವ ಉದ್ದೇಶದಿಂದ ಇಂತಹ ಹೇಯ ಕೃತ್ಯಕ್ಕೆ ಮುಂದಾಗಿದ್ದು ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಬಿಜೆಪಿ ಇನ್ನು ಹೆಚ್ಚಿನ ಹೋರಾಟ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಮುಖಂಡರಾದ ಶ್ರೀಪತಿ ಉಡುಪಿ, ರವಿ ದಂಡಿನ, ಬಸವಣ್ಣೆಪ್ಪ ಚಿಂಚಲಿ, ಎಂ ಎಂ ಹಿರೇಮಠ, ಜಗನ್ನಾಥಸಾ ಭಾಂಡಗೆ, ನಗರಸಭಾ ಸದಸ್ಯರಾದ ಅನಿಲ ಅಬ್ಬಿಗೇರಿ, ರಾಘವೇಂದ್ರ ಯಳವತ್ತಿ ಮುಂತಾದವರು ಮಾತನಾಡಿದರು.
ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ಗ್ರಾಮೀಣ ಮಂಡಲ ಅಧ್ಯಕ್ಷ ಬೂದಪ್ಪ ಹಳ್ಳಿ,ವಿನಾಯಕ ಮಾನ್ವಿ, ಅಶೋಕ ಸಂಕಣ್ಣವರ, ವಿದ್ಯಾವತಿ ಗಡಗಿ, ಲಕ್ಷ್ಮಿ ಕಾಕಿ, ವಿಜಯಲಕ್ಷ್ಮಿ ಮಾನ್ವಿ, ಸುಧೀರ ಕಾಟಿಗೇರ,ನಾಗರಾಜ ತಳವಾರ,ಭದ್ರೇಶ ಕುಸಲಾಪೂರ,ವಾಯ್ ಪಿ ಅಡನೂರ, ಮಂಜುನಾಥ ಮುಳಗುಂದ, ಎಂ.ಎಂ.ಹಿರೇಮಠ, ಭದ್ರೇ ಕುಸ್ಲಾಪೂರ, ರಾಘವೇಂದ್ರ ಯಳವತ್ತಿ, ಅನೀಲ ಅಬ್ಬಿಗೇರಿ, ಬಿ.ಎಸ್.ಚಿಂಚಲಿ, ನಿಂಗಪ್ಪ ಹುಗ್ಗಿ, ಪಕ್ಕಿರೇಶ ರಟ್ಟಿಹಳ್ಳಿ, ವಿನೋದ ಹಂಸನೂರ ಮುಂತಾದವರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Lalita MP