ಬಾಲಸೋರ್, 09 ಮೇ (ಹಿ.ಸ.) :
ಆ್ಯಂಕರ್ : ದೇಶದಲ್ಲಿ ಯುದ್ದ ಪರಿಸ್ಥಿತಿ ಹಿನ್ನೆಲೆಯಲ್ಲಿ,ಒಡಿಶಾದ ಚಾಂಡಿಪುರದಲ್ಲಿರುವ ಡಿಆರ್ಡಿಒ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ತುರ್ತು ಸಭೆ ನಡೆಯಲಿದೆ. ಪೂರ್ವ ವಲಯದ ಡಿಐಜಿ ಡಾ. ಸತ್ಯಜಿತ್ ನಾಯಕ್ ಅವರ ನೇತೃತ್ವದಲ್ಲಿ ಈ ಸಭೆ ಜರುಗಲಿದೆ.
ಸಭೆಯಲ್ಲಿ ಐಟಿಆರ್ ಹಾಗೂ ಪಿಎಕ್ಸ್ಇ ಕೇಂದ್ರಗಳ ಭದ್ರತಾ ವ್ಯವಸ್ಥೆಗಳನ್ನು ಮೌಲ್ಯಮಾಪನ ಮಾಡುವುದರ ಜೊತೆಗೆ, ಭವಿಷ್ಯದ ಎಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ರಕ್ಷಣಾ ಸಚಿವಾಲಯ, ಮಿಲಿಟರಿ ಗುಪ್ತಚರ ಸಂಸ್ಥೆಗಳು ಹಾಗೂ ಸ್ಥಳೀಯ ಆಡಳಿತದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa