ಶಿಕ್ಷಣದ ಪ್ರಾಮುಖ್ಯತೆ ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು : ಯಾಳಗಿ
ಕೊಪ್ಪಳ, 01 ಜೂನ್ (ಹಿ.ಸ.) : ಆ್ಯಂಕರ್ : ಶಿಕ್ಷಣದ ಪ್ರಾಮುಖ್ಯತೆಯನ್ನು ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು. ಪ್ರತಿಯೊಬ್ಬರು ಅದನ್ನು ಅರಿತುಕೊಂಡು ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಉಪನ್ಯಾಸಕ, ಸಾಹಿತಿ ರಮೇಶಬಾಬು ಯಾಳಗಿ ಅವರು ಹೇಳಿದ್ದಾರೆ. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲ
ಶಿಕ್ಷಣದ ಪ್ರಾಮುಖ್ಯತೆ ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು: ಯಾಳಗಿ


ಶಿಕ್ಷಣದ ಪ್ರಾಮುಖ್ಯತೆ ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು: ಯಾಳಗಿ


ಕೊಪ್ಪಳ, 01 ಜೂನ್ (ಹಿ.ಸ.) :

ಆ್ಯಂಕರ್ : ಶಿಕ್ಷಣದ ಪ್ರಾಮುಖ್ಯತೆಯನ್ನು ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು. ಪ್ರತಿಯೊಬ್ಬರು ಅದನ್ನು ಅರಿತುಕೊಂಡು ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಉಪನ್ಯಾಸಕ, ಸಾಹಿತಿ ರಮೇಶಬಾಬು ಯಾಳಗಿ ಅವರು ಹೇಳಿದ್ದಾರೆ.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾರ್ಷಿಕ ಸಮಾರೋಪ ಸಮಾರಂಭ ಹಾಗೂ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶೈಕ್ಷಣಿಕವಾಗಿ ಪ್ರಗತಿ ಸಾಧಿಸದಿದ್ದರೆ ಸಾಮಾಜಿಕವಾಗಿ ಕೊಡುಗೆ ಶೂನ್ಯ. ಸಮಾಜ ಚನ್ನಾಗಿಲ್ಲ ಎನ್ನುವ ಬದಲು ನಾವು ಸರಿಯಾಗಬೇಕಿದೆ. ಸಂಸ್ಕಾರರಹಿತ ವಿದ್ಯಾರ್ಥಿಗಳಿಂದ ಭಯಾನಕ ವಾತಾವರಣ ಸೃಷ್ಟಿಯಾಗುತ್ತದೆ. ವಿದ್ಯಾರ್ಥಿಗಳು ಸಂಸ್ಕಾರ, ಸಂಸ್ಕøತಿ ಅಳವಡಿಸಿಕೊಂಡು ಬದುಕನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ವಿದ್ಯಾರ್ಥಿ ದೆಸೆಯಲ್ಲಿ ಸಮಯಕ್ಕೆ ಆದ್ಯತೆ ನೀಡಬೇಕು. ಕಳೆದು ಹೋದ ವಸ್ತುವನ್ನು ಯಾವಗಲಾದರೂ ಪಡೆಯಬಹುದು, ಗಳಿಸಬಹುದು. ಆದರೆ ಸಮಯ ಮತ್ತು ಸಮುದ್ರದ ಅಲೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಓದುವ ಸಮಯದಲ್ಲಿ ಓದುವುದನ್ನು ಬಿಟ್ಟು ಉಳಿದೆಲ್ಲ ಮಾಡಿದರೆ ಮುಂದೆ ಜೀವನ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ಹೆತ್ತವರಿಗೆ ಮಕ್ಕಳ ಬಗ್ಗೆ ಅಪಾರ ಕನಸುಗಳಿರುತ್ತವೆ, ಭರವಸೆ ಇರುತ್ತದೆ. ಅದನ್ನು ಅರಿತುಕೊಂಡು ಸಮಯದೊಂದಿಗೆ ಹೆಜ್ಜೆ ಹಾಕಬೇಕು ಎಂದು ಮಾರ್ಮಿಕವಾಗಿ ತಿಳಿಸಿದರು.

ಕಾಲೇಜಿನ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರು, ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಭಾಗ್ಯಜ್ಯೋತಿ ಪ್ರಾಸ್ತಾವಿಕ ಮಾತನಾಡಿ, ಅತಿಥಿಗಳಿಗೆ ಕಾಲೇಜಿನ ಪರಿಚಯ ಮತ್ತು ಸಮಾರಂಭದ ಅತಿಥಿ ಪರಿಚಯ ಮಾಡಿಕೊಟ್ಟು, ಪರೀಕ್ಷಾ ಸಿದ್ಧತೆಗಳನ್ನು ವಿವರಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ವೈ.ಬಿ.ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅತಿಥಿ ಉಪನ್ಯಾಸಕ ಶಿವಪುತ್ರಪ್ಪ.ಎಂ., ಪತ್ರಾಂಕಿತ ವ್ಯವಸ್ಥಾಪಕ ಮಹಾಂತೇಶ ವೇದಿಕೆಯಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande