ಕೋಲಾರ ಜೂ.೦೧ (ಹಿ.ಸ) ಆಂಕರ್ :
ಆ್ಯಂಕರ್ : ಕೆಜಿಎಫ್ ನಗರದ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಸಹಾಯಕ ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳಾದ ಬಿ.ಕೃಷ್ಣಪ್ಪ, ಎಂ.ನಾಗರಾಜ್ ಮತ್ತು ಎಎಸ್ಐ ಕೆ.ವಿ.ರಾಧಾಕೃಷ್ಣ, ಲೋಗನಾಥಯ್ಯ ರವರನ್ನು ಬೀಳ್ಕೊಡಲಾಯಿತು.
ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾ0ತರಾಜು ಮಾತನಾಡಿ ಸೇವೆಯಲ್ಲಿರುವಾಗ ಪ್ರತಿಯೊಬ್ಬ ಸರ್ಕಾರಿ ನೌಕರರು ಉತ್ತಮವಾದ ಸೇವೆಯನ್ನು ಸಲ್ಲಿಸುವ ಮೂಲಕ, ಅವರ ಸೇವೆಯು ಮುಂದಿನ ಜನಾಂಗಕ್ಕೆ ಆದರ್ಶವಾಗುವ ಮೂಲಕ ಜನಸಾಮಾನ್ಯರ ಮನಗೆಲ್ಲುವ ಕಾರ್ಯ ಮಾಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾ0ತರಾಜು ಕರೆ ನೀಡಿದರು.
ನಿವೃತ್ತ ಅಧಿಕಾರಿಗಳು ಡಿಎಆರ್ನ ಎಆರ್ಎಸ್ಐ ಬಿ.ಕೃಷ್ಣಪ್ಪ, ಎಂ.ನಾಗರಾಜ್, ರಾಬರ್ಟ್ಸನ್ಪೇಟೆ ಎಎಸ್ಐ ಕೆ.ವಿ.ರಾಧಾಕೃಷ್ಣ, ಬೂದಿಕೋಟೆ ಎಎಸ್ಐ ಲೋಗನಾಥಯ್ಯ ರವರು ಪೊಲೀಸ್ ಇಲಾಖೆಯ ವಿಭಾಗ, ಠಾಣೆ, ಕಛೇರಿಗಳಲ್ಲಿ ಅರ್ಥಪೂರ್ಣ ಸೇವೆಯನ್ನು ಸಲ್ಲಿಸಿ ನಿವೃತ್ತರಾದರು.
ಅವರ ಸೇವೆ ಅನುಭವವು ಎಲ್ಲರಿಗೂ ಮಾರ್ಗದರ್ಶನವಾಗಬೇಕು. ಉದ್ಯೋಗಿಗಳಿಗೆ ನಿವೃತ್ತಿಯು ಇದ್ದೇ ಇರುತ್ತದೆ. ಸೇವಾ ಅವಧಿಯಲ್ಲಿ ಉತ್ತಮವಾದ ರೀತಿಯಲ್ಲಿ ಸೇವೆಯನ್ನು ಸಲ್ಲಿಸಬೇಕು. ನೈತಿಕ ಬೆಂಬಲದೊAದಿಗೆ ಉತ್ತಮ ಬಾಂಧವ್ಯದ ಪರಿಸರದಲ್ಲಿ ಸರ್ಕಾರಿ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸುವ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.
ನಿವೃತ್ತರಾದವರಿಗೆ ಶಾಲು ಹೊದಿಸಿ, ಹಣ್ಣುಹಂಪಲು ನೀಡಿ ಸನ್ಮಾನಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ನಿವೃತ್ತ ಅಧಿಕಾರಿಗಳ ಕುಟುಂಬ ವರ್ಗದವರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಎಸ್.ಪಾಂಡುರ0ಗ, ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಸಶಸ್ತç ಪೊಲೀಸ್ ಇನ್ಸ್ಪೆಕ್ಟರ್ ವಿ.ಸೋಮಶೇಖರ, ಪಿಎಸ್ಐ ಮಾಲಾ, ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಭಾಗವಹಿಸಿದ್ದರು.
ಚಿತ್ರ : ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಕೆಜಿಎಫ್ ಎಸ್ಪಿ ಕೆ.ಎಂ.ಶಾ0ತರಾಜು ಡಿವೈಎಸ್ಪಿ ಎಸ್ ಪಾಂಡುರ0ಗ, ಸಹಾಯಕ ಆಡಳಿತ ಅಧಿಕಾರಿ ವಿಶ್ವನಾಥ ಸನ್ಮಾನಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್