ಬೆಂಗಳೂರು, 01 ಜೂನ್ (ಹಿ.ಸ.) :
ಆ್ಯಂಕರ್ : ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಸುರಿದ ಮಳೆ ಈ ವಾರ ಬಿಡುವು ನೀಡಲಿದೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆ ಪ್ರಮಾಣ ಸಾಮನ್ಯವಾಗಿದ್ದು, ರಾಜ್ಯಾದ್ಯಂತ ಈ ವಾರ ಮೋಡ ಕವಿದ ವಾತಾವರಣ ಇರಲಿದ್ದು. ಮಳೆಯ ಪ್ರಮಾಣ ಕಡಿಮೆಯಾಗಲಿದೆ.
ಇಂದಿನಿಂದ 6ರ ವರೆಗೆ ಅಲ್ಲಲ್ಲಿ ತುಂತುರು ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa