ಬೆಂಗಳೂರು, 11 ಜೂನ್ (ಹಿ.ಸ.) :
ಆ್ಯಂಕರ್ : ಮುಡಾದಲ್ಲಿ ಹಗರಣ ನಡೆದೆ ಇಲ್ಲ ಎಂದು ವಾದಿಸುತ್ತಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಹೇಳಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಆರೋಪಿಯಾಗಿರುವ ಹಗರಣದಲ್ಲಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ₹100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿಗಳನ್ನು ವಶಪಡಿಸಿಕೊಂಡಿದ್ದು, ಇದುವರೆಗೂ ₹400 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಂತಾಗಿದೆ.
ಮೈಸೂರಿನ ಬಡವರ-ಶ್ರಮಿಕರ-ರೈತರ-ದಲಿತರ ಜಮೀನನ್ನು ಕಬಳಿಸಿರುವ ಭ್ರಷ್ಟರೆಲ್ಲರೂ ಒಬ್ಬೊಬ್ಬರಾಗಿ ಜೈಲು ಸೇರುವ ದಿನ ಅತ್ಯಂತ ಹತ್ತಿರದಲ್ಲಿದೆ ಎಂದು ಬಿಜೆಪಿ ಹೇಳಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa