ಬೆಂಗಳೂರು/ಬಳ್ಳಾರಿ, 11 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಸಂಸದರ ಕಚೇರಿ ಮತ್ತು ಮನೆಗಳ ಮೇಲೆ ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಸಂಸದ ಇ. ತುಕರಾಂ ಅವರ ಸಂಡೂರು ನಿವಾಸ, ಶಾಸಕ ಜೆ.ಎನ್. ಗಣೇಶ್ ಅವರ ಹೊಸಪೇಟೆ ನಿವಾಸ, ಬಳ್ಳಾರಿಯ ಶಾಸಕ ನಾರಾ ಭರತರೆಡ್ಡಿ ಅವರ ನೆಹರು ಕಾಲೊನಿಯ ನಿವಾಸ, ಕೂಡ್ಲಿಗಿಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮತ್ತು ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ ರೆಡ್ಡಿ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ಪ್ರತ್ಯೇಕ ತಂಡಗಳಾಗಿ ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಶಾಸಕರ ಭವನದಲ್ಲಿ ಕಾಂಗ್ರೆಸ್ ಶಾಸಕರ ಕೊಠಡಿಗಳು ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa