ಹುಬ್ಬಳ್ಳಿ, 12 ಜೂನ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಬೆಣ್ಣೆ ಹಳ್ಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ತೋಟದ ಮನೆಯಲ್ಲಿ ಕುಟುಂಬವೊಂದು ಸಿಲುಕಿಕೊಂಡಿದೆ.
ನವಲಗುಂದ ತಾಲೂಕಿನ ಯಮನೂರ ಗ್ರಾಮದ ತೋಟದ ಮನೆಯಲ್ಲಿ ಕುಟುಂಬದವರು ಸಿಲುಕಿಕೊಂಡಿದ್ದಾರೆ.
ಬೆಣ್ಣಿಹಳ್ಳದ ಪ್ರವಾಹದ ಆತಂಕದಲ್ಲಿ ನೀರಿನ ಮಧ್ಯೆಯೇ ಕುಟುಂಬ ದಿಗ್ಬಂಧನಕ್ಕೊಳಗಾಗಿದೆ. ಹೆಚ್ಚಿನ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿರುವ ಪರಿಣಾಮ ಯಮನೂರ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa