ಬೆಂಗಳೂರು, 12 ಜೂನ್ (ಹಿ.ಸ.) :
ಆ್ಯಂಕರ್ : ಗುಜರಾತ್ ನ ಅಹಮದಾಬಾದ್ ನಲ್ಲಿ ಭೀಕರ ವಿಮಾನ ದುರಂತಕ್ಕೆ ಈಡಾಗಿರುವ ಸುದ್ದಿ ಕೇಳಿ ಅತ್ಯಂತ ಆಘಾತವಾಗಿದೆ. ಈ ಅವಗಢದಲ್ಲಿ ನೂರಾರು ಜನರು ಜೀವ ಕಳೆದುಕೊಂಡಿರುವುದು ಅತ್ಯಂತ ದುಖದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಘೋರ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ದೇವರು ಚಿರ ಶಾಂತಿ ನೀಡಲಿ, ಮೃತರ ಕುಟುಂಬಸ್ಥರಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಶೋಕ ಸಂದೇಶ ಹಂಚಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa