ನಾಳೆ ಕಲಬುರಗಿಯಲ್ಲಿ ಬಿಜೆಪಿ ವಿಚಾರ ಸಂಕೀರ್ಣ
ಕಲಬುರಗಿ, 13 ಜೂನ್ (ಹಿ.ಸ.) : ಆ್ಯಂಕರ್ : ನಾಳೆ ಕಲಬುರಗಿ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಓನ್ ನೇಷನ್ ಓನ್ ಎಲೆಕ್ಷನ್ ಕುರಿತಂತೆ ಬೃಹತ್ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಎಮ್‌ಎಲ್‌ಸಿ ಹಾಗೂ ಬಿಜೆಪಿ ಹಿರಿಯ ಮುಖಂಡ ಅಮರನಾಥ್ ಪಾಟೀಲ್ ಹೇಳಿದ್ದಾರೆ. ಕಲಬು
ಜೂ.14ರಂದು ಕಲಬುರಗಿಯಲ್ಲಿ ಬಿಜೆಪಿ ವಿಚಾರ ಸಂಕೀರ್ಣ


ಕಲಬುರಗಿ, 13 ಜೂನ್ (ಹಿ.ಸ.) :

ಆ್ಯಂಕರ್ : ನಾಳೆ ಕಲಬುರಗಿ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಓನ್ ನೇಷನ್ ಓನ್ ಎಲೆಕ್ಷನ್ ಕುರಿತಂತೆ ಬೃಹತ್ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಎಮ್‌ಎಲ್‌ಸಿ ಹಾಗೂ ಬಿಜೆಪಿ ಹಿರಿಯ ಮುಖಂಡ ಅಮರನಾಥ್ ಪಾಟೀಲ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2.30 ಗಂಟೆಗೆ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಎಸ್‌ಎಸಿ ಆಡಿಟೋರಿಯಂನಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ವಿಚಾರ ಸಂಕಿರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಓನ್ ನೇಷನ್ ಓನ್ ಎಲೆಕ್ಷನ್ ಕುರಿತಾಗಿ ಮಾತನಾಡಲಿದ್ದಾರೆಂದು ಅಮರನಾಥ್ ಪಾಟೀಲ್ ಹೇಳಿದ್ದಾರೆ.

ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿಯಾಗಲಿದ್ದಾರೆಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ, ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್, ಗ್ರಾಮಾಂತರ ಅಧ್ಯಕ್ಷ ಅಶೋಕ ಬಗಲಿ, ಮುಖಂಡರಾದ ಸಂತೋಷ ಹಾದಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande