ಬಳ್ಳಾರಿ ಮಹಾನಗರ ಪಾಲಿಕೆ ಮಳಿಗೆಗಳ ತೆರವು ; ಅಸಂಬದ್ಧ - ಬಿಜೆಪಿ
ಬಳ್ಳಾರಿ, 13 ಜೂನ್ (ಹಿ.ಸ.) ಆ್ಯಂಕರ್: ಬಳ್ಳಾರಿ ಮಹಾನಗರ ಪಾಲಿಕೆಯ ಹಳೆಯ ಕಚೇರಿ (ನಟರಾಜ್ ಟಾಕೀಸ್ ಮುಂಭಾಗದ)ಯ ಕಾಂಪ್ಲೆಕ್ಸ್‍ನಲ್ಲಿರುವ 40 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ 40 ವರ್ಷಗಳಿಂದ ವ್ಯಾಪಾರ ವ್ಯವಹಾರ ನಡೆಸುತ್ತಿದ್ದವರನ್ನು ಅಧಿಕಾರಿಗಳು ಒತ್ತಾಯದಿಂದ ಬಿಡಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪ
ಬಳ್ಳಾರಿ ಮಹಾನಗರ ಪಾಲಿಕೆ ಮಳಿಗೆಗಳ ತೆರವು ; ಅಸಂಬದ್ಧ - ಬಿಜೆಪಿ


ಬಳ್ಳಾರಿ ಮಹಾನಗರ ಪಾಲಿಕೆ ಮಳಿಗೆಗಳ ತೆರವು ; ಅಸಂಬದ್ಧ - ಬಿಜೆಪಿ


ಬಳ್ಳಾರಿ, 13 ಜೂನ್ (ಹಿ.ಸ.)

ಆ್ಯಂಕರ್: ಬಳ್ಳಾರಿ ಮಹಾನಗರ ಪಾಲಿಕೆಯ ಹಳೆಯ ಕಚೇರಿ (ನಟರಾಜ್ ಟಾಕೀಸ್ ಮುಂಭಾಗದ)ಯ ಕಾಂಪ್ಲೆಕ್ಸ್‍ನಲ್ಲಿರುವ 40 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ 40 ವರ್ಷಗಳಿಂದ ವ್ಯಾಪಾರ ವ್ಯವಹಾರ ನಡೆಸುತ್ತಿದ್ದವರನ್ನು ಅಧಿಕಾರಿಗಳು ಒತ್ತಾಯದಿಂದ ಬಿಡಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ನೇತೃತ್ವವಹಿಸಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರು, ಅಧಿಕಾರಿಗಳು ಮಳಿಗೆಗಳ ತೆರವುಗೊಳಿಸಲು ಗೂಂಡಾಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಕಳೆದ 40 ವರ್ಷಗಳಿಂದ ಬಾಡಿಗೆ ಪಾವತಿಸುತ್ತಿರುವ ವರ್ತಕರು ಏಕಾಏಕಿ ಎಲ್ಲಿಗೆ ಸ್ಥಳಾಂತರಗೊಳ್ಳಬೇಕು ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಮತ್ತು ಪಕ್ಷದ ಮುಖಂಡರು - ಕಾರ್ಯಕರ್ತರು ಅಭಿವೃದ್ಧಿಯನ್ನು ಸದಾ ಬೆಂಬಲಿಸುತ್ತಾರೆ. ಆದರೆ, ಅಭಿವೃದ್ಧಿಯ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗಬಾರದು. ಯಾವುದೇ ನೋಟೀಸ್ ಜಾರಿ ಮಾಡದೇ ಏಕಾಏಕಿಯಾಗಿ ಅಧಿಕಾರಿಗಳು ಮಳಿಗೆಗಳನ್ನು ಖಾಲಿ ಮಾಡಿಸುತ್ತಿರುವುದು ತಪ್ಪು. ಅಧಿಕಾರಿಗಳ ಮೇಲೆ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಮಹಾನಗರ ಪಾಲಿಕೆಯ ಬಿಜೆಪಿಯ ಹಾಲಿ ಮತ್ತು ಮಾಜಿ ಕಾರ್ಪೊರೇಟರ್‍ಗಳು - ಬಿಜೆಪಿ ಮುಖಂಡರು - ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳ ಗೂಂಡಾ ವರ್ತನೆಯನ್ನು ತೀವ್ರವಾಗಿ ಖಂಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande