ಗವಾಯಿಗಳವರ ಸ್ಮಾರಕ ಭವನಕ್ಕ ಕೇಂದ್ರ ಸರ್ಕಾರದ ನೆರವು : ಬಸವರಾಜ್ ಬೊಮ್ಮಾಯಿ
ಗದಗ, 14 ಜೂನ್ (ಹಿ.ಸ.) : ಆ್ಯಂಕರ್ : ಜಗತ್ತಿನ ಸೃಷ್ಟಿಯನ್ನು ನೋಡಲು ನಮ್ಮೆಲ್ಲರಿಗೂ ಆ ಭಗವಂತ ಕಣ್ಣುಗಳನ್ನು ನೀಡಿದ್ದಾನೆ. ಆದರೆ ಒಳ ಜಗತ್ತನ್ನು ನೋಡಲು ಉಭಯ ಶ್ರೀಗಳನ್ನು ಸೃಷ್ಟಿ ಮಾಡಿದ್ದಾನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗ ನಗರದ ವೀರೇಶ್ವರ ಪುಣ್ಯಾಶ್
ಪೋಟೋ


ಗದಗ, 14 ಜೂನ್ (ಹಿ.ಸ.) :

ಆ್ಯಂಕರ್ : ಜಗತ್ತಿನ ಸೃಷ್ಟಿಯನ್ನು ನೋಡಲು ನಮ್ಮೆಲ್ಲರಿಗೂ ಆ ಭಗವಂತ ಕಣ್ಣುಗಳನ್ನು ನೀಡಿದ್ದಾನೆ. ಆದರೆ ಒಳ ಜಗತ್ತನ್ನು ನೋಡಲು ಉಭಯ ಶ್ರೀಗಳನ್ನು ಸೃಷ್ಟಿ ಮಾಡಿದ್ದಾನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗದಗ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪರಮಪೂಜ್ಯ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 81ನೇ ಹಾಗೂ ಪದ್ಮಭೂಷಣ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 15ನೇ? ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಧರ್ಮಸಭೆ, ಕೀರ್ತನ ಸಮ್ಮೇಳನ ಹಾಗೂ ಅಂಧರಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಭಾವನಾತ್ಮಕವಾಗಿ ಯಾವುದಾದರೂ ಅವಶಿವಾ ಯಾತ್ರೆ ನಡೆದಿದ್ದರೆ ಅದು ಶ್ರೀಗುರು ಪುಟ್ಟರಾಜ ಕವಿ ಗವಾಯಿಗಳವರ ಅಂತಿಮ ಯಾತ್ರೆಯಾಗಿದೆ. ಈ ಯಾತ್ರೆಯಲ್ಲಿ ಪಾಲ್ಗೊಂಡಿರುವುದು ನನ್ನ ಪೂರ್ವ ಜನ್ಮದ ಪುಣ್ಯದ ಫಲ, ಉಭಯ ಶ್ರೀಗಳು ದೇವರ ಮಕ್ಕಳು ಜಗತ್ತಿನಲ್ಲಿ ಮುಗ್ಧತೆ ಮತ್ತು ಆತ್ಮಸಾಕ್ಷಿಗಳನ್ನು ಕಾಪಾಡಿಕೊಂಡು ಬರುವುದು ಅಷ್ಟು ಸುಲಭ ಮಾತಲ್ಲ, ಅವುಗಳನ್ನು ಜೀವನದುದ್ರಕ್ಕೂ ನಡೆ-ನುಡಿಗಳಿಂದ ಉಭಯ ಗುರುಗಳು ಕಾಪಾಡಿಕೊಂಡು ಬಂದಿದ್ದಾರೆ ಎಂದು ಹೇಳಿದರು.

ದಿಂಗಾಲೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಅರರಾಜರ-ಗದಗ ಬಹಷ್ಕರದ ಪೂಜ್ಯಶ್ರೀ ಅಭಿನವ ಶಿವಾನಂದ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು, ಹೋತನಹಳ್ಳಿ ಸಿಂದಗಿ ಶಾಖಾಮಠದ ಪೂಜ್ಯಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸಿದ್ದರು. ಗದುಗಿನ ನೀಲಕಂಠ ಪಟ್ಟದಾರ್ಯ ಮಹಾಸ್ವಾಮಿಗಳು, ಮುಕ್ತಶ್ವೇಶ್ವರ ಮಠದ ಪೂಜ್ಯಶ್ರೀ ಶಂಕರಾನಂದ ಸ್ವಾಮಿಗಳು, ಬೆಳಹೊಡದ ಪೂಜ್ಯಶ್ರೀ ಪರಿಪೂರ್ಣಾನಂದ ಭಾರತಿ ಮಹಾಸ್ವಾಮಿಗಳು, ಮುದ್ದೇಬಿಹಾಳದ ಪೂಜ್ಯಶ್ರೀ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಅಂತೂರು-ಬೆಂತೂರಿನ ಪೂಜ್ಯಶ್ರೀ ಕುಮಾರದೇವರು, ಲಿಂಗಸೂರಿನ ಪೂಜ್ಯಶ್ರೀ ಶಿವಶರಣೆ ನಂದೀಶ್ವರಿ ಅಮ್ಮನವರು ಸಮ್ಮುಖ ವಹಿಸಿದ್ದರು.

ಸಂಸದ ಬಸವರಾಜ್ ಬೊಮ್ಮಾಯಿ ಮಾತನಾಡಿ, ಪುಟ್ಟರಾಜ ಕವಿ ಗವಾಯಿಗಳವರ ಸ್ಮಾರಕ ಭವನಕ್ಕ ಕೇಂದ್ರ ಸರ್ಕಾರದಿಂದ ಲಭ್ಯವಾಗುವ ನೆರವು ನೀಡಲು ಸಿದ್ಧನಿದ್ದೇನೆ ಎಂದರು‌

ಸಮಿತಿಯ ಅಧ್ಯಕ್ಷ ರವೀಂದ್ರನಾಥ್ ದಂಡಿನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ಬಿ, ಆಸೂಟ, ಜಯಶ್ರೀ ಉಗಲಾಟದ, ಶಿವಲೀಲಾ ಜಿಕ್ಕಿ, ಡಾ. ರಾಜೇಂದ್ರ ಬಸರಿಗಿಡದ, ಜಿ.ಪಂ ಮಾಜಿ ಸದಸ್ಯ ನಿವಪ್ರಕಾಶ ಮಹಾಜನಶೆಟ್ಟು, ಪಂಕಜ ವಾಪಣಾ, ಬಲರಾಮ ಬಸವಾ, ಬಸವರಾಜ ಬಿಂಗಿ, ಎಸ್.ಎಂ. ಗೌಡರ, ಸಾಧಿಕ ನರಗುಂದ, ವಿಕ್ರಂ ಜೈನ, ಅಯ್ಯಪ್ಪ ನಾಯ್ಕರ, ಮಲ್ಲಾಪುರದ ಗುಂಡಪ್ಪ ಕಬ್ಬಿಣದ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande