ಭೋಪಾಲ್, 14 ಜೂನ್ (ಹಿ.ಸ.) :
ಆ್ಯಂಕರ್ : ಮುಂದಿನ ಚುನಾವಣಾ ತಯಾರಿಗಳ ಅಂಗವಾಗಿ ಬಿಜೆಪಿ ಮಧ್ಯಪ್ರದೇಶದ ಪಚ್ಮರಿಯಲ್ಲಿ ಇಂದಿನಿಂದ ಜೂನ್ 16ರವರೆಗೆ ಬಿಜೆಪಿ ಶಾಸಕರು ಹಾಗೂ ಸಂಸದರಿಗೆ ಮೂರು ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಿದೆ.
ಶಿಬಿರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಲ್ಗೊಳ್ಳಲಿದ್ದಾರೆ.
ಈ ಶಿಬಿರದಲ್ಲಿ 201 ಜನ ಪ್ರತಿನಿಧಿಗಳು ಭಾಗವಹಿಸಲಿದ್ದು, ಪಕ್ಷದ ಕಾರ್ಯಪಧ್ಧತಿ, ಸಾರ್ವಜನಿಕ ವ್ಯವಹಾರ, ಸಮಯ ನಿರ್ವಹಣೆ ಮತ್ತು ತಂತ್ರಜ್ಞಾನ ಬಳಕೆಯ ಬಗ್ಗೆ ತರಬೇತಿ ನೀಡಲಾಗುವುದು.
ಪ್ರಧಾನಿ ಮೋದಿ ನೇತೃತ್ವದ ಸರಕಾರದ ಸಾಧನೆಗಳ ಪ್ರದರ್ಶನವೂ ನಡೆಯಲಿದೆ. ಇದೇ ವೇಳೆ ಎಲ್ಲ ಶಾಸಕರು ಮತ್ತು ಸಂಸದರು ‘ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದಲ್ಲಿ ಮರ ನೆಡುವ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa