ಚೈತನ್ಯ ಸಾಗರ ಗ್ರಂಥ ಲೋಕಾರ್ಪಣೆ ಸಮಾರಂಭಕ್ಕೆ ಆಹ್ವಾನ
ರಾಯಚೂರು, 14 ಜೂನ್ (ಹಿ.ಸ.) : ಆ್ಯಂಕರ್ : ಹೈದರಾಬಾದ್ ನಲ್ಲಿ ತೆಲಂಗಾಣ ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಮಲ್ಲುಭಟ್ಟಿ ವಿಕ್ರಮಾರ್ಕ್ ಹಾಗೂ ಸಚಿವರಾದ ವಾಟಕಿ ಶ್ರೀಹರಿ ಅವರನ್ನು ಕರ್ನಾಟಕ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಸಮ್ಮುಖದಲ್ಲಿ ರಾಯಚೂರು ಕಾಂಗ್ರೆಸ್ ಮುಖಂಡರಾದ ಕೆ ಶಾಂತಪ್ಪ,
ಸಮಾರಂಭಕ್ಕೆ ಡಿಸಿಎಂ ಹಾಗೂ ಸಚಿವರಿಗೆ ಆಹ್ವಾನಿಸಿದ ಸಮಿತಿ*


ಸಮಾರಂಭಕ್ಕೆ ಡಿಸಿಎಂ ಹಾಗೂ ಸಚಿವರಿಗೆ ಆಹ್ವಾನಿಸಿದ ಸಮಿತಿ


ರಾಯಚೂರು, 14 ಜೂನ್ (ಹಿ.ಸ.) :

ಆ್ಯಂಕರ್ : ಹೈದರಾಬಾದ್ ನಲ್ಲಿ ತೆಲಂಗಾಣ ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಮಲ್ಲುಭಟ್ಟಿ ವಿಕ್ರಮಾರ್ಕ್ ಹಾಗೂ ಸಚಿವರಾದ ವಾಟಕಿ ಶ್ರೀಹರಿ ಅವರನ್ನು ಕರ್ನಾಟಕ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಸಮ್ಮುಖದಲ್ಲಿ ರಾಯಚೂರು ಕಾಂಗ್ರೆಸ್ ಮುಖಂಡರಾದ ಕೆ ಶಾಂತಪ್ಪ, ಅಮರೇಗೌಡ ಹಂಚಿನಾಳ, ನರಸಿಂಹಲು ಮಾಡಗಿರಿ ಸೇರಿದಂತೆ ಅನೇಕರು ಸೌಹಾರ್ದಯುತವಾಗಿ ಭೇಟಿ ಮಾಡಿದರು.

ಎನ್ಎಸ್ ಬೋಸರಾಜು ಅಭಿನಂದನಾ ಸಮಿತಿಯ ಪದಾಧಿಕಾರಿಗಳು ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರ 79 ನೇ ಜನ್ಮದಿನೋತ್ಸವ ನಿಮಿತ್ಯ ಜೂನ್ 21 ರಂದು ರಾಯಚೂರಿನಲ್ಲಿ ಆಯೋಜಿಸಿರುವ ಅಭಿನಂದನೆ ಹಾಗೂ ಚೈತನ್ಯ ಸಾಗರ ಗ್ರಂಥ ಲೋಕಾರ್ಪಣೆ ಸಮಾರಂಭಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಲಕ್ಷ್ಮೀ ಪತಿ ರಡ್ಡಿ‌‌ ಸೇರಿದಂತೆ ಅನೇಕರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande