ಕಲಬುರಗಿ, 14 ಜೂನ್ (ಹಿ.ಸ.) :
ಆ್ಯಂಕರ್ : ಭಾರತ ದೇಶ ಜಗತ್ತಿನ ಅತೀ ದೊಡ್ಡ ಆರ್ಥಿಕ ದೇಶವಾಗಿ ಹೊರಹೊಮ್ಮಿದೆ. ಟ್ರೀಪಲ್ ತಲಾಕ್ ತೆಗೆದಿದ್ದಕ್ಕೆ ಮುಸ್ಲಿಮ್ ಹೆಣ್ಮಕ್ಕಳಿಗೆ ಗೌರವ ಸಿಗುತ್ತಿದೆ. ಮೋದಿ ಮತ್ತು ಬಿಜೆಪಿ ಮುಸ್ಲಿಮರ ವಿರೋಧಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶವನ್ನ ಒಡೆಯುವವರ ವಿರುದ್ಧ, ಪಾಕಿಸ್ತಾನ ಜಿಂದಾಬಾದ್ ಎನ್ನುವವರ ವಿರುದ್ಧ ಮೋದಿ. ಕಾಂಗ್ರೆಸ್ ಥರ ನಾವು ಅಲ್ಪಸಂಖ್ಯಾತ ಒಲೈಕೆ ಮಾಡೋದಿಲ್ಲ ಎಂದ ಅವರು, ದಕ್ಷಿಣ ಕನ್ನಡದಲ್ಲಿ ಕೋಮು ನಿಗ್ರಹ ದಳ ಸ್ಥಾಪನೆ ಮಾಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆನ ಕಾಪಾಡಬೇಕು ಅನ್ನೊ ದೃಷ್ಟಿಯಿಂದ ನಿಗ್ರಹ ದಳ ಮಾಡಿಲ್ಲ. ಬಿಜೆಪಿ ಕಾರ್ಯಕರ್ತರನ್ನ, ಹಿಂದೂ ಕಾರ್ಯಕರ್ತರ ನಿಗ್ರಹಕ್ಕೆ ಕೋಮು ನಿಗ್ರಹ ದಳ ಮಾಡಲಾಗಿದೆ. ನಿಮ್ಮ ಯಾವುದೇ ಷಡ್ಯಂತ್ರಕ್ಕೆ, ಬೆದರಿಕೆಗೆ ನಮ್ಮ ಕಾರ್ಯಕರ್ತರು ಬಗ್ಗುವುದಿಲ್ಲ ಎಂದು ಎಚ್ಚರಿಸಿದರು.
ಮೋದಿ ಸರ್ಕಾರದ 11 ವರ್ಷಗಳ ಸಾಧನೆಗೆ ಸಿದ್ದರಾಮಯ್ಯ O ಮಾರ್ಕ್ಸ್ ನೀಡಿದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದರು. ಅದಕ್ಕಾಗಿ ಅವರಿಗೆ ಅಭಿನಂದನೆಗಳನ್ನ ತಿಳಿಸುತ್ತೇನೆ. ಅದ್ಯಾವಾಗ ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡೋಕೆ ಶುರು ಮಾಡ್ತೋ. ಮೋದಿ ಸರ್ಕಾರಕ್ಕೆ ಸಿದ್ದರಾಮಯ್ಯ ಸರ್ಟಿಫಿಕೇಟ್ ಕೊಡೊ ಅಗತ್ಯವಿಲ್ಲ. ರಾಜ್ಯ ಸರ್ಕಾರದ ಬಗ್ಗೆ ಜನ ಬೀದಿ ಬೀದಿಯಲ್ಲಿ ಮಾತಾಡ್ತಿದಾರೆ. ಸುಳ್ಳನ್ನ ಹೇಳೊದ್ರಲ್ಲಿ ಸಿದ್ದರಾಮಯ್ಯ ನಿಸ್ಸಿಮರು. ಹಿಂದೆ ನಮ್ಮ ಸರ್ಕಾರಕ್ಕೆ 40% ಸರ್ಕಾರ ಅಂತಾ ಆಪಾದನೆ ಮಾಡಿದ್ರು. ಆದರೆ ಆರೋಪ ಸುಳ್ಳಾಯಿತು. ಕೇಂದ್ರ ಸರ್ಕಾರದ ಯೋಜನೆಗಳಿಗೆ ಕಲ್ಲು ಹಾಕೋ ಕೆಲಸ ರಾಜ್ಯ ಸರ್ಕಾರ ಮಾಡ್ತಿದೆ.ರಾಜ್ಯ ಸರ್ಕಾರಕ್ಕೆ ಅಭಿವೃದ್ಧಿ ಯೋಜನೆಗಳಿಗೆ ಕೊಡಲು ಹಣವಿಲ್ಲ ಎಂದು ಆರೋಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Samarth biral