ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಉಡುಪಿ, 16 ಜೂನ್ (ಹಿ.ಸ.) : ಆ್ಯಂಕರ್ : ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕೆಂಪು ಎಚ್ಚರಿಕೆ ಘೋಷಿಸಲಾಗಿದೆ. ಕಳೆದ 24 ಗಂಟೆಯಿಂದ ನಿರಂತರ ಮಳೆ ಸುರಿಯುತ್ತಿದ್ದು. ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಆತಂಕ ಸೃಷ್ಟಿಯಾಗಿದೆ. ಬೈಂದೂರು, ಕುಂದಾಪುರ ‌ಭಾ
Alert


ಉಡುಪಿ, 16 ಜೂನ್ (ಹಿ.ಸ.) :

ಆ್ಯಂಕರ್ : ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕೆಂಪು ಎಚ್ಚರಿಕೆ ಘೋಷಿಸಲಾಗಿದೆ. ಕಳೆದ 24 ಗಂಟೆಯಿಂದ ನಿರಂತರ ಮಳೆ ಸುರಿಯುತ್ತಿದ್ದು. ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಆತಂಕ ಸೃಷ್ಟಿಯಾಗಿದೆ. ಬೈಂದೂರು, ಕುಂದಾಪುರ ‌ಭಾಗದಲ್ಲಿ ನದಿಗಳು ಅಪಾಯದ ಮಟ್ಟ ಮೀರಿ‌‌ ಹರಿಯುತ್ತಿವೆ.

ನದಿ ಪಾತ್ರ ಹಾಗೂ ಸಮುದ್ರ ಪಾತ್ರಕ್ಕೆ‌ ತೆರಳದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಗಂಟೆಗೆ ೪೫ ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande