ಬಳ್ಳಾರಿ, 16 ಜೂನ್ (ಹಿ.ಸ.) :
ಆ್ಯಂಕರ್ : ಲೇಖಕ ಸಿದ್ದರಾಮಯ್ಯ ಕಲ್ಮಠ ಅವರು ಬರೆದಿರುವ ಕರ್ನಾಟಕ ಏಕೀಕರಣದ ಹೋರಾಟಗಾರ, ಏಕೈಕ ಹುತಾತ್ಮ ಪೈಲ್ವಾನ್ ರಂಜಾನ್ ಸಾಬ್ ಅವರ ಕೃತಿಯನ್ನು ಸತ್ಯಂ ಬಿಎಡ್ ಕಾಲೇಜಿನ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಣೆ ಮತ್ತು ವಿಚಾರ ಸಂಕಿರಣವು ಜೂನ್ 17ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು ಪುಸ್ತಕ ವಿತರಣೆಯನ್ನು ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲರಾದ ಅಶ್ವರಾಮು ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಜಿಟಿ ಫೌಂಡೇಶನ್ನ ಅಧ್ಯಕ್ಷರಾದ ಜೋಳದರಾಶಿ ತಿಮ್ಮಪ್ಪ, ಮಹಾನಗರ ಪಾಲಿಕೆ ಸದಸ್ಯ ಪಿ. ಗಾದೆಪ್ಪ, ಜಿ.ಕೆ. ಸ್ವಾಮಿ, ವಕೀಲರಾದ ಬಾದಾಮಿ ಶಿವಲಿಂಗ ಅವರು ಮುಖ್ಯ ಅತಿಥಿಗಳಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್