ಕೋಲಾರ, ೧೭ ಜೂನ್ (ಹಿ.ಸ) :
ಆ್ಯಂಕರ್ : ಜಿಲ್ಲಾ ಔಷಧಿ ನಿಯಂತ್ರಕರಿಗೆ ಔಷಧಿ ಮಳಿಗೆಗಳಿಗೆ ಭೇಟಿ ನೀಡಿ ಡ್ರಗ್ಸ್ ಮಾರಾಟ ಬಗ್ಗೆ ವರದಿ ಮಾಡುವಂತೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸಿ ಯೋಜನೆಗಳನ್ನು ನೀಡಲು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಕಾರ್ಯಕ್ರಮ ಹಾಗೂ ತೀವ್ರತರ ಅತೀಸಾರ ಭೇದಿ ತಡೆಗಟ್ಟುವ ಅಭಿಯಾನ, ದಢಾರ-ರುಬೆಲ್ಲಾ ಏಲಿಮಿನೇಷನ್-೨೦೨೫ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಕಾರ್ಯಪಡೆ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ. ಪ್ರಸನ್ನಕುಮಾರ ಮಾತನಾಡಿ ಏಡ್ಸ್ ಕಾರ್ಯಕ್ರಮದಡಿ ಸರ್ಕಾರದ ವಿವಿಧ ಯೋಜನೆಗಳಾದ ಹೆಚ್.ಐ.ವಿ. ಸೊಂಕಿತ ಮಹಿಳೆಯರಿಗೆ ಧನಶ್ರೀ ಯೋಜನೆ, ಹೆಚ್.ಐ.ವಿ. ಸೋಂಕಿತ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯ, ಹೆಚ್.ಐ.ವಿ. ಸೋಂಕಿತ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆ, ಪುನರ ವಸತಿ ಯೋಜನೆ ಹಾಗೂ ಮೈತ್ರಿಯೋಜನೆ, ಲಿಂಗತ್ವ ಅಲ್ಪಸಂಖ್ಯಾತರಿಗೆ, ಚೇತನಯೋಜನೆ ಲೈಂಗಿಕ ಕಾರ್ಯಕರ್ತೆಯರಿಗಾಗಿ ಸೇವೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಮಹಿಳಾ ಲೈಂಗಿಕ ಕಾರ್ಯಕರ್ತೆಯರು ಒಟ್ಟು-೪೪೭೬ ಇವರಲ್ಲಿ ಹೆಚ್.ಐ.ವಿ. ಸೋಂಕಿಗೆ ಒಳಗಾಗಿ ಎ.ಆರ್.ಟಿ.ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ೬೯. ಸಕ್ರಿಯವಾಗಿರುವ ಪುರುಷ ಲೈಂಗಿಕ ಕಾರ್ಯಕರ್ತೆರು(ಎಂ.ಎಸ್.ಎ0) ಒಟ್ಟು– ೩೪೮೦, ಹೆಚ್.ಐ.ವಿ. ಸೋಂಕಿಗೆ ಒಳಗಾಗಿ ಎ.ಆರ್.ಟಿ.ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ-೫೯ ಸೂಜಿ ಸಿರಂಜ್ಗಳಿAದ ಡ್ರಗ್ಸ್ ತೆಗೆದುಕೊಳ್ಳುವವರ ಸಂಖ್ಯೆ - ೧೨೯೮ ಹೆಚ್.ಐ.ವಿ. ಸೋಂಕಿಗೆ ಒಳಗಾಗಿ ಎ.ಆರ್.ಟಿ.ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ-೦೮ ಎಂಬ ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು.
ಡಾ. ಮೀಸ್ಬಾ, ಪೋಲಿಯೋ ಸರ್ವೇಕ್ಷಣಾಧಿಕಾರಿಗಳು ಮಾತನಾಡಿ ಲಸಿಕಾ ಕಾರ್ಯಕ್ರಮ ಪ್ರಗತಿಯ ಬಗ್ಗೆ ತಿಳಿಸಿದರು ಹಾಗೂ ಎಂ.ಆರ್. ಪೂರ್ಣ ಪ್ರಮಾಣ ಲಸಿಕೆಯ ಮಾಹಿತಿಯನ್ನು ನೀಡಿದರು.
ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಮ ವಹಿಸುವುದು ಮತ್ತು ಎಲ್ಲಾ ೫ ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವಂತೆ ಕ್ರಮ ವಹಿಸುವುದು.
ದಡಾರ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಾಗೂ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಹಕರಿಸುವುದು ಮತ್ತು ಎಲ್ಲಾ ೫ ವರ್ಷದೊಳಗಿನ ಮಕ್ಕಳಿಗೆ ವಿಟಮಿನ್-ಎ ನೀಡಲು ಸಹಕರಿಸುವುದು ಹಾಗೂ ಎಲ್ಲಾ ಮಕ್ಕಳು ದಢಾರ ರುಬೆಲ್ಲ ಲಸಿಕೆ ಜೊತೆ ವಿಟಮಿನ್-ಎ ಪಡೆದಿರುವ ಕುರಿತು ಖಾತರಿಪಡಿಸಿಕೊಳ್ಳಲು ತಿಳಿಸಿದರು.
ಯಾವುದೇ ಶಂಕಿತ ದಢಾರರು ಬೆಲ್ಲಾ ಪ್ರಕರಣ ಕಂಡುಬ0ದಲ್ಲಿ ತಕ್ಷಣ ಸಂಬ0ಧಪಟ್ಟ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಿಗೆ ಮಾಹಿತಿ ನೀಡಿದರು.
೦-೫ ವರ್ಷದೊಳಗಿನ ಮಕ್ಕಳು ಅತೀಸಾರ ಬೇಧಿಯಿಂದ ಮರಣವಾಗದಂತೆ ತಡೆಗಟ್ಟಲು ಸಂಬ0ಧಿಸಿದ ಇಲಾಖೆಗಳು ಸಹಕಾರ ನೀಡುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೀಸ್ಬಾ, ಎಸ್.ಎಂ.ಓ., ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು ಹಾಗೂ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿದರು.
ಚಿತ್ರ : ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆರೋಗ್ಯ ಇಲಾಖೆಯ ಸಭೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್