ಕೋಲಾರ ಜೂನ್ ೧೮ (ಹಿ.ಸ) :
ಆ್ಯಂಕರ್ : ಉಪನ್ಯಾಸಕರು ಕಲಿಸುವ ಪಾಠವನ್ನು ವಿದ್ಯಾರ್ಥಿಗಳು ಶಿಸ್ತಿನಿಂದ ಆಲಿಸಬೇಕು. ಉತ್ತಮ ವ್ಯಾಸಂಗವನ್ನು ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಮುಳಬಾಗಿಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಬಿ.ಕೆ. ರಘು ತಿಳಿಸಿದರು.
ಬುಧವಾರ ಮುಳಬಾಗಿಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ವಿಭಾಗಗಳ ಮುಖ್ಯಸ್ಥರುಗಳಾದ ಕವಿತಾ, ಕೆ.ವಿ.ವೆಂಕಟರೆಡ್ಡಿ, ಮಂಜುಳದೇವಿ, ದೀಪಿಕಾ, ದೀಪ, ರಿಜಿಸ್ಟಾçರ್ ಎಂ.ನಾಗವೇಣಿ ಹಾಗೂ ಎಲ್ಲಾ ವಿಭಾಗಗಳ ಉಪನ್ಯಾಸಕರು, ಕಚೇರಿ ಸಿಬ್ಬಂದಿ, ಕಾರ್ಯಾಗಾರ ಸಿಬ್ಬಂದಿ, ಕಾರ್ಯಕ್ರಮದ ಸಂಯೋಜಕರಾದ ಡಾ.ಬಸವರಾಜ್, ಎನ್.ಮುನಿರಾಜು ಉಪಸ್ಥತರಿದ್ದರು.
ಚಿತ್ರ : ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಸರ್ಕಾರಿ ಪಾಲಿಟೆನ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ತರಗತಿಗಳನ್ನು ಆರಂಭಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್