ನವದೆಹಲಿ, 19 ಜೂನ್ (ಹಿ.ಸ.) :
ಆ್ಯಂಕರ್ : ಯುದ್ಧಪೀಡಿತ ಇರಾನ್ನಿಂದ 'ಆಪರೇಷನ್ ಸಿಂಧು' ಅಡಿಯಲ್ಲಿ 110 ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ನವದೆಹಲಿಗೆ ಸುರಕ್ಷಿತವಾಗಿ ಕರೆತರಲಾಯಿತು. ಮೊದಲು ಅವರನ್ನು ಅರ್ಮೇನಿಯಾಗೆ ಕರೆದೊಯ್ದು, ಅಲ್ಲಿಂದ ವಿಮಾನದಲ್ಲಿ ದೆಹಲಿಗೆ ಕರೆತರಲಾಯಿತು. ಹೆಚ್ಚಿನ ವಿದ್ಯಾರ್ಥಿಗಳು ಜಮ್ಮು ಮತ್ತು ಕಾಶ್ಮೀರದವರಾಗಿದ್ದಾರೆ.
ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿ ನೀಡಿದ ನೆರವಿಗೆ ಧನ್ಯವಾದ ಅರ್ಪಿಸಿದರು. ಈ ಕಾರ್ಯಾಚರಣೆಗೆ ಪ್ರಧಾನಮಂತ್ರಿ ಮೋದಿ ಹಾಗೂ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ವಿದ್ಯಾರ್ಥಿ ಸಂಘ ಧನ್ಯವಾದ ತಿಳಿಸಿದೆ. ಇನ್ನುಳಿದ ವಿದ್ಯಾರ್ಥಿಗಳನ್ನು ಸಹ ಶೀಘ್ರದಲ್ಲೇ ಸ್ಥಳಾಂತರಿಸಲಾಗುವುದು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa