ಬೆಂಗಳೂರು, 19 ಜೂನ್ (ಹಿ.ಸ.):
ಆ್ಯಂಕರ್:ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಜುಲೈ 16-17 ರಂದು ನಿಗದಿಯಾಗಬಹುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮುಂದೂಡಲು ಕಾರಣ ಕೇಳಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಚಿವರು ಆ ಭಾಗದ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಆ ಪ್ರದೇಶಕ್ಕೆ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆಯ ಮೇರೆಗೆ ಮುಂದೂಡಲಾಯಿತು ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa