ಕೊಪ್ಪಳ, 02 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿ ಇರುವ ಎಲ್ಲಾ ಕ್ರೈಸ್ ಶಾಲೆಗಳ ಖಾಯಂ ಶಿಕ್ಷರು - ಸಿಬ್ಬಂದಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರದಿಂದ ಪ್ರತಿಭಟನೆ ಆರಂಭವಾಗಿದೆ.
ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿರುವ ಕ್ರೈಸ್ ವಸತಿ ಶಿಕ್ಷಣ ಸಂಘ ಶಿಕ್ಷಕ ಸಿಬ್ಬಂದಿ ಇರುವ ಸ್ಥಳಕ್ಕೆ ಭೇಟಿ ನೀಡಿ ಸಂಸದ ಕೆ. ರಾಜಶೇಖರ ಹಿಟ್ನಾಳ ಅವರು ಮನವಿ ಸ್ವೀಕರಿಸಿ, ನಿಮ್ಮ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನವನ್ನು ಸೆಳೆಯುವುದಾಗಿ ಹೇಳಿದರು.
ಪ್ರತಿಭಟನಾಕಾರರು, ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು-ನೌಕರರು ಹಲವು ಸೌಲಭ್ಯ ಗಳಿಂದ ವಂಚಿತರಾಗಿದ್ದು, ನಮ್ಮ ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸಬೇಕು. ವಸತಿ ಶಿಕ್ಷಣ ನಿರ್ದೇಶನಾಲಯದ ಎಸ್.ಸಿ/ಎಸ್.ಟಿ/ಓಬಿಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ಅಧೀನಕ್ಕೆ ತರಬೇಕು. ಜ್ಯೋತಿ ಸಂಜೀವಿನಿ ಅನುಷ್ಠಾನ, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯಗಳನ್ನು ನೀಡಬೇಕು. ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು. ಶೇ. 10 ರಷ್ಟು ವಿಶೇಷ ಭತ್ಯೆ ಮಂಜೂರಾತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್