ಕೋಲಾರ, ೦೨ ಜೂನ್ (ಹಿ.ಸ) :
ಆ್ಯಂಕರ್ : ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಶಾಖೆಯಲ್ಲಿ ತೆರವಾಗಿದ್ದ ಖಜಾಂಚಿ ಸ್ಥಾನಕ್ಕೆ ಜಿಲ್ಲಾಧ್ಯಕ್ಷ ಎಂ.ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ ಸಿ.ವಿ.ಶಿವಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ನೂತನ ಖಜಾಂಚಿಯಾಗಿ ಆಯ್ಕೆಯಾದ ಶಿವಣ್ಣ ಪದಾಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿಯೂ, ತಿಂಗಳ ಮೊದಲ ದಿನ ವೇತನ ಬಟವಾಡೆಯಾಗಲು ಇಲಾಖೆಯ ಮೇಲೆ ಒತ್ತಡ ತಂದು ಶ್ರಮಿಸುವುದಾಗಿಯೂ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಅಪ್ಪಯ್ಯ ಗೌಡ, ಉಪಾಧ್ಯಕ್ಷ ಓಬಳಾ ರೆಡ್ಡಿ,ಮಹಿಳಾ ಉಪಾಧ್ಯಕ್ಷೆ ಲಲಿತಮ್ಮ, ಸಹ ಕಾರ್ಯದರ್ಶಿ ನಾರಾಯಣಸ್ವಾಮಿ, ಸಂಘಟನಾ ಕಾರ್ಯದರ್ಶಿ ರವಿಕುಮಾರ್, ಕೇಂದ್ರ ಸಂಘಟನೆಯ ಉಪಾಧ್ಯಕ್ಷ ಡಾ. ಎನ್ ಇಂಚರ ನಾರಾಯಣಸ್ವಾಮಿ, ಬಂಗಾರಪೇಟೆ ನಾರಾಯಣಸ್ವಾಮಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಎಂ ಸುರೇಂದ್ರ, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ವೆಂಕಟಗಿರಿಯಪ್ಪ, ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ಮಾಲೂರು ತಾಲೂಕು ಅಧ್ಯಕ್ಷ ಷಣ್ಮುಗಯ್ಯ, ಕಾರ್ಯದರ್ಶಿ ರಮೇಶ್, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ರೆಡ್ಡಪ್ಪ, ಪ್ರಧಾನ ಕಾರ್ಯದರ್ಶಿ ರಘುನಾಥ ರೆಡ್ಡಿ, ಕೆಜಿಎಫ್ ತಾಲೂಕಿನ ಪ್ರಧಾನ ಕಾರ್ಯದರ್ಶಿ ಪಿ.ವಿ. ಶ್ರೀನಿವಾಸ್, ಖಜಾಂಚಿ ರವಿಚಂದ್ರನ್ ನಾಯ್ಡು, ಕೋಲಾರ ತಾಲೂಕು ಅಧ್ಯಕ್ಷ ಎಂ.ಎನ್.ಶ್ರೀನಿವಾಸ್ ಮೂರ್ತಿ, ಪ್ರಧಾನ ಕಾರ್ಯದರ್ಶಿ ವಿ.ನಾರಾಯಣಸ್ವಾಮಿ, ಮುಳಬಾಗಿಲಿನ ಭಾಸ್ಕರ ರೆಡ್ಡಿ ಹಾಜರಿದ್ದರು.
ಚಿತ್ರ : ಕೋಲಾರ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಶಾಖೆಗೆ ಖಜಾಂಚಿಯಾಗಿ ಶ್ರೀನಿವಾಸಪುರ ತಾಲ್ಲೂಕಿನ ಸಿ.ವಿ.ಶಿವಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್