ನಲ್ಬರಿ, 20 ಜೂನ್ (ಹಿ.ಸ.) :
ಆ್ಯಂಕರ್ : ಅಸ್ಸಾಂನ ನಲ್ಬರಿ ಜಿಲ್ಲೆಯ ಬರ್ಖೇಟ್ರಿ ವೃತ್ತದ ಬ್ರಹ್ಮಪುತ್ರ ನದಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ದೋಣಿ ಅಪಘಾತದಲ್ಲಿ ಐದು ಶಾಲಾ ಮಕ್ಕಳೊಂದಿಗೆ ಒಬ್ಬ ವಯಸ್ಕ ನಾಪತ್ತೆಯಾಗಿದ್ದಾರೆ. ದೋಣಿಯಲ್ಲಿ ಸುಮಾರು 20-25 ಜನರಿದ್ದರು ಎಂದು ತಿಳಿದುಬಂದಿದ್ದು, ಉಳಿದವರನ್ನು ರಕ್ಷಿಸಲಾಗಿದೆ.
ಶೋಧ ಕಾರ್ಯಾಚರಣೆ ಕತ್ತಲಿನ ಕಾರಣದಿಂದ ನಿನ್ನೆ ನಿಲ್ಲಿಸಲಾಗಿದ್ದು, ಇಂದು ಬೆಳಗ್ಗೆ ಮತ್ತೆ ಆರಂಭಿಸಲಾಗಿದೆ. ಎಸ್ ಡಿಆರ್ ಎಫ್ ಮತ್ತು ಎನ್ ಡಿಆರ್ ಎಫ್ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ದೋಣಿ ನಾಡಿಯಾ ಚಾರ್ ನಿಂದ ಲಾರ್ಕುಚಿ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa