ಬೆಂಗಳೂರು, 20 ಜೂನ್ (ಹಿ.ಸ.) :
ಆ್ಯಂಕರ್ : ಬಡಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಬೇಕೆಂಬ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಮಹತ್ವದ ಆರೋಗ್ಯ ಯೋಜನೆಗಳನ್ನು ಜಾರಿಗೊಳಿಸಿದೆ,” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಜಿಎಸ್ ಮೆಡಿಕಲ್ ಕಾಲೇಜು ಹಾಗೂ 1000 ಹಾಸಿಗೆಗಳ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಈ ಆಸ್ಪತ್ರೆ ಬಡವರಿಗೆ ಉಚಿತ ಹಾಗೂ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ. ಇದೇ ಮನುಷ್ಯತ್ವದ ನಿಜವಾದ ರೂಪ,” ಎಂದು ಹೇಳಿದರು.
ಆಯುಷ್ಮಾನ್ ಭಾರತ್ ಯೋಜನೆ ಬಡ ಕುಟುಂಬಗಳಿಗೆ ವರ್ಷಕ್ಕೆ ₹5 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ ನೀಡುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರ ಅಡಿಯಲ್ಲಿ ಈಗಾಗಲೇ 7 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎಂದರು.
ಮಿಷನ್ ಇಂದ್ರಧನುಷ್ 15 ವರ್ಷ ವಯಸ್ಸು ಇರುವ ಮಕ್ಕಳಿಗೆ ಅಗತ್ಯ ಲಸಿಕೆಗಳನ್ನು ನೀಡುವ ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲೂ ಲಸಿಕಾಕರಣವನ್ನು ಯಶಸ್ವಿಯಾಗಿ ತಲುಪಿಸಲಾಗಿದೆ ಎಂದರು.
ಗ್ರಾಮೀಣ ಶೌಚಾಲಯ ಯೋಜನೆ ಮೋದಿ ಸರ್ಕಾರದ ಪ್ರಮುಖ ‘ಸ್ವಚ್ಛ ಭಾರತ್’ ಯೋಜನೆಯಡಿಯಲ್ಲಿ 12 ಕೋಟಿ ಮನೆಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಆರೋಗ್ಯ ಮತ್ತು ಸ್ಯಾನಿಟೇಶನ್ನಲ್ಲಿ ಕ್ರಾಂತಿಕಾರಿ ಬದಲಾವಣೆ ಕಂಡು ಬಂದಿದೆ ಎಂದರು.
ವೈದ್ಯಕೀಯ ಶಿಕ್ಷಣ ವಿಸ್ತರಣೆ ದೇಶದಾದ್ಯಂತ 780 ಮೆಡಿಕಲ್ ಕಾಲೇಜುಗಳಿದ್ದು, 1.80 ಲಕ್ಷ ಎಂಬಿಬಿಎಸ್ ಸೀಟುಗಳು ,74 ಸಾವಿರ ಪಿಜಿ ಸೀಟುಗಳು ಲಭ್ಯವಿವೆ, ಪ್ರತಿವರ್ಷ 1 ಲಕ್ಷಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರು ಹಾಗೂ 70,000 ಡಬಲ್ ಡಿಗ್ರಿ ವೈದ್ಯರು ಪಾಸಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಮೋದಿ ಅವರು 26 ವರ್ಷಗಳ ಹಿಂದೆಯೇ ಬಡವರ ಆರೋಗ್ಯ ವೆಚ್ಚದ ಬಗ್ಗೆ ಕಾಳಜಿ ವಹಿಸಿದ್ದರು. ಆರೋಗ್ಯ ಸೇವೆ ಮಾತ್ರವಲ್ಲ, ಶಿಕ್ಷಣ ಹಾಗೂ ಸೇವಾ ಕ್ಷೇತ್ರಗಳಲ್ಲಿಯೂ ರಾಷ್ಟ್ರದ ನಿರಂತರ ಪ್ರಗತಿಯೆ ಗುರಿಯಾಗಿದೆ ಎಂದು ಅಮಿತ್ ಶಾ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa