ಬೆಂಗಳೂರು, 20 ಜೂನ್ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಜ್ಯ ಕಚೇರಿಗೆ ದೀರ್ಘ ವಿರಾಮದ ಬಳಿಕ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ಅಸಮಾಧನಿತರೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.
ಪ್ರಹ್ಲಾದ್ ಜೋಷಿ ಅವರ ಮಾತುಕತೆಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ. ಪ್ರತಿದಿನ ಕಚೇರಿಗೆ ಬರುತ್ತೇನೆ, ವಾರದಲ್ಲಿ ಎರಡು ದಿನ ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುತ್ತೇನೆ, ಎಂದರು.
ಬಿ.ಆರ್.ಪಾಟೀಲ್ ದೂರವಾಣಿ ಸಂಭಾಷಣೆ ಕುರಿತು ಪ್ರತಿಕ್ರಿಯಿಸಿ, ಲಂಚದ ವಿಚಾರದಲ್ಲಿ ಅವರ ಹೇಳಿಕೆ ನೂರಕ್ಕೆ ನೂರು ಸತ್ಯ. ಸರ್ಕಾರ ತಪ್ಪು ಒಪ್ಪಿಕೊಂಡು ತಕ್ಷಣ ಕ್ರಮ ಕೈಗೊಳ್ಳಲಿ, ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa