ಬಳ್ಳಾರಿ, 20 ಜೂನ್ (ಹಿ.ಸ.) :
ಆ್ಯಂಕರ್ : ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಕೃಷಿಗೆ ಒದಗಿಸುವ ಕುರಿತು 124ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಜೂನ್ 27ರ ಮಧ್ಯಾಹ್ನ 3 ಗಂಟೆಗೆ ವಿಧಾನ ಸೌಧದ 3ನೇ ಮಹಡಿಯ ಸಮ್ಮೇಳನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಮತ್ತು ತುಂಗಭದ್ರಾ ಯೋಜನೆಯ ಅಧೀಕ್ಷಕ ಅಭಿಯಂತರರು, ಸಭಾ ಸೂಚನೆಯನ್ನು ನೀಡಿದ್ದು, ಸಚಿವ ಶಿವರಾಜ್ ಎಸ್. ತಂಗಡಗಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್