ಹೊಸಪೇಟೆ, 21 ಜೂನ್ (ಹಿ.ಸ.) :
ಆ್ಯಂಕರ್ : ಆರೋಗ್ಯಕರ ಜೀವನ ಸಾಗಿಸಲು ಮತ್ತು ದೈಹಿಕವಾಗಿ ಸದೃಢವಾಗಲು ಯೋಗವು ಮುಖ್ಯ ಪಾತ್ರ ವಹಿಸಲಿದೆ ಎಂದು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಹೇಳಿದ್ದಾರೆ.
ನಗರದ ಸ್ವಾತಂತ್ರ್ಯ ಉದ್ಯಾನವನ(ಫ್ರೀಡಂ ಪಾರ್ಕ್)ದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸ್ಕೌಟ್ಸ್, ಗೈಡ್ಸ್ ಘಟಕ, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ, ಪತಂಜಲಿ ಯೋಗ ಸಂಸ್ಥೆ, ಎ.ಎಫ್.ಐ. ಮತ್ತು ಯೋಗ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ 11ನೇ ಯೋಗ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.
ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಮಾತನಾಡಿ, ಯೋಗವನ್ನು ನಿಯಮಿತವಾಗಿ ಮಾಡುವುದರಿಂದ ರಕ್ತಪರಿಚಲನೆ, ಜೀರ್ಣಕ್ರಿಯೆ, ಉತ್ತಮ ನಿದ್ರೆಗೆ ಅನುಕೂಲವಾಗಲಿದೆ. ಭಾರತದಲ್ಲಿ ಆಯುರ್ವೇದದಲ್ಲಿ ಹೇಳಿರುವಂತೆ ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಮೂರರ ನಡುವಿನ ಸಮತೋಲನವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದರು.
ಯೋಗ ಗುರುಗಳಾದ ಕಿರಣ್ ಜೀ ಮತ್ತು ರಾಜೇಶ್ ಕರ್ವಾ ಆಸನಗಳನ್ನು ಮಾಡಿಸಿದರು.
ಈ ವೇಳೆ ಪ್ರಭಾರಿ ಬಿಇಒ ಶೇಖರಪ್ಪ ಹೊರಪೇಟೆ, ವೈದ್ಯಾಧಿಕಾರಿ ಡಾ.ಮುನಿವಾಸುದೇವರೆಡ್ಡಿ, ಡಾ.ಕೆ.ಹೆಚ್.ಗುರುಬಸವರಾಜ, ಡಾ.ಹೆಚ್.ಕೊಟ್ರಮ್ಮ, ಡಾ.ಸರಸ್ವತಿ, ಡಾ.ಹೇಮ, ಡಾ.ಹಾಲಮ್ಮ, ಆಕಾಶವಾಣಿಯ ನಾಗರತ್ನ, ಪತಂಜಲಿ ಯೋಗ ಸಂಸ್ಥೆಯ ಜಿಲ್ಲಾ ಉಸ್ತುವಾರಿ ಎಫ್.ಡಿ.ಹಳ್ಳಿಕೇರಿ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಅಧ್ಯಕ್ಷರಾದ ಮಾನಸ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ 1000ಕ್ಕೂ ಹೆಚ್ಚು ಶಾಲಾ ಕಾಲೇಜಿನ ಮಕ್ಕಳು, ವಿವಿಧ ಯೋಗ ಸಂಸ್ಥೆಗಳ ಯೋಗ ಪಟುಗಳು, ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್