ನಾನು ಸತ್ಯ ಹೇಳಿದ್ದೇನೆ : ಬಿ.ಆರ್. ಪಾಟೀಲ್
ಬೆಂಗಳೂರು, 21 ಜೂನ್ (ಹಿ.ಸ.) : ಆ್ಯಂಕರ್ : ಜನಪರ ಆಡಳಿತ ಕೊಡುವುದಾಗಿ ಹೇಳಿ ಅಧಿಕಾರಕ್ಕೆ ಬಂದಿದ್ದು. ಆದರೆ, ಹೀಗಾಗಬಾರದಿತ್ತು. ನಾನು ಸತ್ಯ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಿ. ಆರ್. ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಸತಿ ಹಂಚಿಕೆಯಲ್
Brp


ಬೆಂಗಳೂರು, 21 ಜೂನ್ (ಹಿ.ಸ.) :

ಆ್ಯಂಕರ್ : ಜನಪರ ಆಡಳಿತ ಕೊಡುವುದಾಗಿ ಹೇಳಿ ಅಧಿಕಾರಕ್ಕೆ ಬಂದಿದ್ದು. ಆದರೆ, ಹೀಗಾಗಬಾರದಿತ್ತು. ನಾನು ಸತ್ಯ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಿ. ಆರ್. ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಸತಿ ಹಂಚಿಕೆಯಲ್ಲಿ ಲಂಚ ಆರೋಪಕ್ಕೆ ಸಂಬಂಧಪಟ್ಟಂತೆ ಆಡಿಯೋ ಸಂಭಾಷಣೆ ಬಗ್ಗೆ ಪ್ರತಿಕ್ರಿಯಿಸಿ, ಅದು ನಾನೇ ಮಾತನಾಡಿದ ಆಡಿಯೋ. ಎಲ್ಲ ಸರ್ಕಾರಗಳಲ್ಲೂ ಭ್ರಷ್ಟಾಚಾರ ನಡೆದಿತ್ತು. ನಾವೂ ಜನಪರ ಆಡಳಿತ ಕೊಡುತ್ತೇವೆ ಎಂದು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು. ಆದರೆ ಹೀಗೆ ಆಗಬಾರದಿತ್ತು ಎಂದಿದ್ದಾರೆ.

5 ರಿಂದ 6 ಪಂಚಾಯಿತಿಗಳಲ್ಲಿ ದುಡ್ಡು ಕೊಟ್ಟು ಮನೆಗಳನ್ನು ತೆಗೆದುಕೊಂಡಿದ್ದಾರೆ. ನಾನು ಕೊಟ್ಟ ಪತ್ರಕ್ಕೆ ಮನೆಗಳು ಹಂಚಿಕೆ ಆಗಿಲ್ಲ. ನಾನು 4 ಪತ್ರಗಳನ್ನು ಕೊಟ್ಟಿದ್ದೆ. ನನ್ನ ಕ್ಷೇತ್ರಕ್ಕೆ ಮನೆ ಕೊಡಿ ಎಂದು ಪತ್ರ ಕೊಟ್ಟರೂ ಮನೆಗಳನ್ನು ಕೊಟ್ಟಿರಲಿಲ್ಲ. ಪಂಚಾಯಿತಿ ಅಧ್ಯಕ್ಷರು ನಾನು ಕೊಟ್ಟ ಪತ್ರಗಳನ್ನೇ ಕೊಟ್ಟು ಮನೆಗಳನ್ನು ತಂದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಮಾಹಿತಿ ಕೇಳಿದರೆ ನೀಡುವೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande