ಬಳ್ಳಾರಿ, 21 ಜೂನ್ (ಹಿ.ಸ.) :
ಆ್ಯಂಕರ್ : ಭಾರತೀಯ ಸಂಸ್ಕೃತಿಯ ಯೋಗ ಪ್ರಪಂಚಕ್ಕೆ ವಿಶಿಷ್ಟ ಕೊಡುಗೆಯಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ನ ಯೋಗ ಶಿಕ್ಷಕರು ಹಾಗೂ ಜೆ.ಎಸ್.ಡಬ್ಲ್ಯೂ ರಿಫ್ರಾಕ್ಟರೀಸ್ನ ಉಪಾಧ್ಯಕ್ಷ ಗಣಪತಿ ಪ್ರಸಾದ್.ಎಂ ಅವರು ಹೇಳಿದ್ದಾರೆ.
11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿವಿ ಬಯಲು ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯವಾದ ಕಾರ್ಯಕ್ರಮವನ್ನು ಪತಂಜಲಿ ಮಹರ್ಶಿರವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದ್ದಾರೆ.
ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್.ಎನ್.ರುದ್ರೇಶ್ ಮಾತನಾಡಿ, ಒತ್ತಡದ ಜೀವನ ನಿರ್ವಹಿಸಲು ಜನರು ಪಟ್ಟಣಗಳಿಂದ ಹಳ್ಳಿಗಳತ್ತ ಮುಖಮಾಡಿದ್ದಾರೆ. ಅದರಲ್ಲಿ ಯೋಗವನ್ನು ಅನುಸರಿಸುತ್ತಿದ್ದಾರೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ ಎಂದರು.
ವಿವಿಯ ಯೋಗ ಅಧ್ಯಯನ ಉಪನ್ಯಾಸಕರಾದ ಮಹೇಶ ಬಾಬು, ವಿದ್ಯಾರ್ಥಿಗಳಿಂದ ಸಾಮಾನ್ಯ ಯೋಗ ಶಿಷ್ಟಾಚಾರ ಹಾಗೂ ಸಾಮೂಹಿಕ ಯೋಗ ಪ್ರದರ್ಶನ ಮಾಡಲಾಯಿತು. ಮಹೇಶ್ ಹಾಗೂ ಚಂದ್ರಿಕ ಯೋಗ ವಿದ್ಯಾರ್ಥಿಗಳಿಂದ ಯೋಗ ನೃತ್ಯ ಮಾಡಲಾಯಿತು. ನೋಟ್ಬುಕ್ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕೃತ ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಡಕಲ್ಪೇಟೆ ಕಥಾಸಂಕಲನಕಾರ ವಿರೇಂದ್ರ ರುವಿಹಾಳ, ಶುದ್ಧ ವಿಜ್ಞಾನ ನಿಕಾಯದ ಡೀನರಾದ ಡಾ. ಶಶಿಕಾಂತ ಮಜಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್