ನವದೆಹಲಿ, 21 ಜೂನ್ (ಹಿ.ಸ.) :
ಆ್ಯಂಕರ್ : ಇರಾನ್ನಿಂದ ಇದುವರೆಗೂ ಆಪರೇಷನ್ ಸಿಂಧು ಅಡಿಯಲ್ಲಿ 500ಕ್ಕೂ ಹೆಚ್ಚು ಭಾರತೀಯರು ದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಇರಾನ್- ಇಸ್ರೇಲ್ ಸಂಘರ್ಷದ ಬಳಿಕ ಇರಾನ್ನಲ್ಲಿರುವ ಭಾರತೀಯರನ್ನು ಕರೆತರುವ ವ್ಯವಸ್ಥೆ ಮಾಡಲಾಗಿದ್ದು, ವಿದೇಶಾಂಗ ಸಚಿವಾಲಯವು ಸ್ಥಳಾಂತರಿಸುವ ಕಾರ್ಯಾಚರಣೆಯ ಸ್ಥಿತಿಯ ಕುರಿತು ಮಾಹಿತಿ ನೀಡಿದೆ.
ಸ್ಥಳಾಂತರ ನಡೆಸಿದವರಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳಿದ್ದು, ಅವರೆಲ್ಲಾ ಶುಕ್ರವಾರ ತಡರಾತ್ರಿ ದೆಹಲಿ ತಲುಪಿಸಿದ್ದಾರೆ.
ಆಪರೇಷನ್ ಸಿಂಧು ವಿಮಾನಗಳು ಭಾರತೀಯ ನಾಗರಿಕರನ್ನು ಮರಳಿ ಕರೆತರುತ್ತಿವೆ. ಇರಾನ್ನಿಂದ 290 ಭಾರತೀಯರನ್ನು ಸ್ಥಳಾಂತರ ಮಾಡಲಾಗಿದೆ. ಇದರಲ್ಲಿ ವಿದ್ಯಾರ್ಥಿಗಳು ಮತ್ತು ಧಾರ್ಮಿಕ ಯಾತ್ರಾರ್ಥಿಗಳು ಇದ್ದಾರೆ.
ಜೂನ್ 20ರಂದು ರಾತ್ರಿ 11.30ಕ್ಕೆ ನವದೆಹಲಿಗೆ ವಿಮಾನವನ್ನು ಕಾರ್ಯದರ್ಶಿ ಅರುಣ್ ಚಟರ್ಜಿ ಸ್ವಾಗತಿಸಿದರು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಂದೀರ್ ಜೈಸ್ವಾಲ್ ಎಕ್ಸ್ ಜಾಲತಾಣದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa