ಹೊಸಪೇಟೆ, 21 ಜೂನ್ (ಹಿ.ಸ.) :
ಆ್ಯಂಕರ್ : ಅಂಚೆ ಇಲಾಖೆಯಿಂದ ನಿವೃತ್ತರಾದ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಇಲಾಖೆ ನೌಕರಿಕರಿಗಾಗಿ ಮತ್ತು ಕುಟುಂಬ ಪಿಂಚಣಿ ಪಡೆಯುತ್ತಿರುವ ನಿವೃತ್ತ ಅಂಚೆ ನೌಕರರ ಕುಟುಂಬದವರಿಗಾಗಿ ಜೂನ್ 25 ರಂದು ಬುಧವಾರ, ಸಂಜೆ 4:00 ಗಂಟೆಗೆ ಬಳ್ಳಾರಿ ವಿಭಾಗೀಯ ಕಚೇರಿಯಲ್ಲಿ ಪಿಂಚಣಿ ಅದಾಲತ್ ನ್ನು ಆಯೋಜಿಸಲಾಗಿದೆ.
ಪಿಂಚಣಿದಾರರು ತಮ್ಮ ಕುಂದು ಕೊರತೆಗಳು ಇದ್ದಲ್ಲಿ ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ವಿಭಾಗೀಯ ಕಾರ್ಯಾಲಯ ಕೋಟೆ ಬಳ್ಳಾರಿ ಅವರಿಗೆ ಜೂನ್ 23 ರ ಮುಂಚಿತವಾಗಿ ತಲುಪುವಂತೆ ಪತ್ರ ಮುಖೇನ ಅಥವಾ doballari.ka@indiapost.gov.in ಗೆ ಇಮೇಲ್ ಮೂಲಕ ಕಳುಹಿಸಿಕೊಡಬೇಕು.
ತಮ್ಮ ಅಹವಾಲು ನೊಂದಿಗೆ ಪಿಂಚಣಿ ಅದಾಲತ್ ನಲ್ಲಿ ಹಾಜರಾಗಬೇಕು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್