ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯಕ್ಕೆ ಭೂಮಿ ಪೂಜೆ
ರಾಯಪುರ್, 22 ಜೂನ್ (ಹಿ.ಸ.) : ಆ್ಯಂಕರ್ : ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದಲ್ಲಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಮತ್ತು ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರವೇರಿಸಿದರು. ನವ ರಾಯ್‌ಪುರದ ಬಂಜಾರಿಯಲ್ಲಿ ನಡ
Amit sha


ರಾಯಪುರ್, 22 ಜೂನ್ (ಹಿ.ಸ.) :

ಆ್ಯಂಕರ್ : ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದಲ್ಲಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಮತ್ತು ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರವೇರಿಸಿದರು.

ನವ ರಾಯ್‌ಪುರದ ಬಂಜಾರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ, ವಿಧಾನಸಭಾಧ್ಯಕ್ಷ ಡಾ. ರಮಣ್ ಸಿಂಗ್, ಉಪಮುಖ್ಯಮಂತ್ರಿಗಳಾದ ಅರುಣ್ ಸಾ ಮತ್ತು ವಿಜಯ್ ಶರ್ಮಾ, ಬಿಜೆಪಿ ರಾಜ್ಯಾಧ್ಯಕ್ಷ ಕಿರಣ್ ಸಿಂಗ್ ದೇವ್, ಸಚಿವ ಕೇದಾರ್ ಕಶ್ಯಪ್, ಸಂಸದ ಬ್ರಿಜ್‌ಮೋಹನ್ ಅಗರ್ವಾಲ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಈ ಹೊಸ ಅಧಿಸಂಸ್ಥೆಗಳು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅನುಭವದೊಂದಿಗೆ ವಿಧಿವಿಜ್ಞಾನ ತಜ್ಞರನ್ನು ಸಿದ್ಧಪಡಿಸಿ, ಅಪರಾಧ ತನಿಖೆಗಳನ್ನು ವೈಜ್ಞಾನಿಕ ಮತ್ತು ಪಾರದರ್ಶಕವಾಗಿ ನಡೆಸುವಲ್ಲಿ ಸಹಕಾರ ನೀಡಲಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande