ಜೂನ್ ತಿಂಗಳ ಪಡಿತರ ಹಂಚಿಕೆ
ದಾವಣಗೆರೆ, 22 ಜೂನ್ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲೆಗೆ 2025ರ ಮಾಹೆಗೆ ನಾನಾ ವರ್ಗದ ಪಡಿತರ ಚೀಟಿದಾರರಿಗೆ ಆಹಾರಧಾನ್ಯ ಹಂಚಿಕೆ ಮಾಡಲಾಗಿದೆ. ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯ 3.ಕೆಜಿ ಅಕ್ಕಿಯನ್ನು ಹಾಗೂ 2 ಕೆ.ಜಿ ರಾಗಿಯನ್ನು ಜೂನ್ 30 ರವರೆಗೆ ಆಹಾರಧಾನ್ಯ
ಜೂನ್ ತಿಂಗಳ ಪಡಿತರ ಹಂಚಿಕೆ


ದಾವಣಗೆರೆ, 22 ಜೂನ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲೆಗೆ 2025ರ ಮಾಹೆಗೆ ನಾನಾ ವರ್ಗದ ಪಡಿತರ ಚೀಟಿದಾರರಿಗೆ ಆಹಾರಧಾನ್ಯ ಹಂಚಿಕೆ ಮಾಡಲಾಗಿದೆ. ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯ 3.ಕೆಜಿ ಅಕ್ಕಿಯನ್ನು ಹಾಗೂ 2 ಕೆ.ಜಿ ರಾಗಿಯನ್ನು ಜೂನ್ 30 ರವರೆಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸುವುದರೊಂದಿಗೆ ಹೆಚ್ಚುವರಿಯಾಗಿ 5ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ.

ಅಂತ್ಯೋದಯ(ಎಎವೈ) ಪಡಿತರದಾರರಿಗೆ 1 ರಿಂದ 3 ಸದಸ್ಯರಿರುವ ಪಡಿತರ ಚೀಟಿಗಳಿಗೆ 21 ಕೆಜಿ ಅಕ್ಕಿ ಮತ್ತು 14 ಕೆಜಿ ರಾಗಿ, ಆದ್ಯತಾ(ಪಿಹೆಚ್ ಹೆಚ್ ಸೆಂಟ್ರಲ್) ಕಾರ್ಡ್‍ದಾರರರಿಗೆ 8ಕೆಜಿ ಅಕ್ಕಿ ಹಾಗೂ 2 ಕೆಜಿ ರಾಗಿ, ಆದ್ಯತಾ(ಪಿಹೆಚ್‍ಹೆಚ್ ಸ್ಟೇಟ್) ಪ್ರತಿ ಸದಸ್ಯರಿಗೆ ತಲಾ 10 ಕೆಜಿ, ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡಿತರ ಪಡೆಯಲು ಅವಕಾಶವಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande