ವಾರಣಾಸಿಯಲ್ಲಿ ಕೇಂದ್ರ ವಲಯ ಮಂಡಳಿ ಸಭೆ ಪ್ರಾರಂಭ
ವಾರಣಾಸಿ, 24 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ದೇಶದ ಸಾಂಸ್ಕೃತಿಕ ರಾಜಧಾನಿ ವಾರಣಾಸಿಯ ತಾರಾ ಹೋಟೆಲ್ ತಾಜ್‌ನಲ್ಲಿ ಕೇಂದ್ರ ವಲಯ ಮಂಡಳಿಯ 25ನೇ ಸಭೆ ಆರಂಭವಾಗಿದೆ. ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರಾಖಂಡ ಮುಖ್ಯಮಂತ್ರಿ
Meeting


ವಾರಣಾಸಿ, 24 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ದೇಶದ ಸಾಂಸ್ಕೃತಿಕ ರಾಜಧಾನಿ ವಾರಣಾಸಿಯ ತಾರಾ ಹೋಟೆಲ್ ತಾಜ್‌ನಲ್ಲಿ ಕೇಂದ್ರ ವಲಯ ಮಂಡಳಿಯ 25ನೇ ಸಭೆ ಆರಂಭವಾಗಿದೆ.

ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಮಧ್ಯಪ್ರದೇಶ ಮುಖ್ಯಮಂತ್ರಿ ಡಾ. ಮೋಹನ್ ಯಾದವ್, ಹಾಗೂ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಉಪಸ್ಥಿತರಿದ್ದರು. ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ.

ಸಭೆಯಲ್ಲಿ ಗಡಿ ವಿವಾದಗಳು, ಜಲ ವಿವಾದಗಳು,ಕಾನೂನು ಮತ್ತು ಸುವ್ಯವಸ್ಥೆ, ಸಾಮಾಜಿಕ ಅಭಿವೃದ್ಧಿ, ಅಲ್ಪಸಂಖ್ಯಾತರ ಸಮಸ್ಯೆಗಳು, ಪರಿಸರ ಸಂಬಂಧಿತ ಅಂಶಗಳ ಕುರಿತು ಚರ್ಚೆ ನಡೆಯುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande