ವಿಮಾ ಯೋಜನೆಯಡಿ ಬೆಳೆ ನೋಂದಾಯಿಸಲು ರೈತರಿಗೆ ಸೂಚನೆ
ಕೊಪ್ಪಳ, 26 ಜೂನ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (PMFBY) ಮತ್ತು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ (R-WBCIS) ಗಳಡಿ ಜಿಲ್ಲೆಯ ಎಲ್ಲಾ ರೈತರು ಪಪ್ಪಾಯ, ಮಾವು, ದ್ರಾಕ್ಷಿ, ದಾಳ
ವಿಮಾ ಯೋಜನೆಯಡಿ ಬೆಳೆ ನೋಂದಾಯಿಸಲು ರೈತರಿಗೆ ಸೂಚನೆ


ಕೊಪ್ಪಳ, 26 ಜೂನ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (PMFBY) ಮತ್ತು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ (R-WBCIS) ಗಳಡಿ ಜಿಲ್ಲೆಯ ಎಲ್ಲಾ ರೈತರು ಪಪ್ಪಾಯ, ಮಾವು, ದ್ರಾಕ್ಷಿ, ದಾಳಿಂಬೆ, ಹಸಿಮೆಣಸಿನಕಾಯಿ ಮತ್ತು ಈರುಳ್ಳಿ(ನೀ), ಟೊಮ್ಯಾಟೋ, ಈರುಳ್ಳಿ(ಮ.ಆ) ಬೆಳೆಗಳನ್ನು ವಿಮೆಗೆ ಒಳಪಡಿಸಬಹುದು. ರೈತರು ತಮ್ಮ ಪಾಲಿನ ವಿಮಾ ವಂತಿಗೆಯನ್ನು ಜುಲೈ 31 ರೊಳಗೆ ಪಾವತಿಸಲು ಈ ಯೋಜನೆಯಡಿ ಪ್ರಯೋಜನ ಪಡೆಯಬಹುದು. ಇದಕ್ಕಾಗಿ ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪೆನಿ (R-WBCIS) ಹಾಗೂ ಟಾಟಾ ಎಐಜಿ (PMFBY) ರವರನ್ನು ಆಯ್ಕೆಮಾಡಲಾಗಿದೆ.

ಜಿಲ್ಲೆಯ ಅಧಿಸೂಚಿತ ತಾಲ್ಲೂಕುಗಳಾದ ಕೊಪ್ಪಳ, ಕುಷ್ಟಗಿ, ಗಂಗಾವತಿ, ಕಾರಟಗಿ, ಕನಕಗಿರಿ, ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕುಗಳಲ್ಲಿ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಅಧಿಸೂಚಿತ ಬೆಳೆಗಳಾದ ದ್ರಾಕ್ಷ್ಷಿ, ಮಾವು, ದಾಳಿಂಬೆ, ಹಸಿ ಮೆಣಸಿನಕಾಯಿ, ಪಪ್ಪಾಯ ಹಾಗೂ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅಧಿಸೂಚಿತ ಬೆಳೆಗಳಾದ ಈರುಳ್ಳಿ(ನೀ), ಟೊಮ್ಯಟೋ, ಈರುಳ್ಳಿ(ಮ.ಆ) ಬೆಳೆಗಳನ್ನು ವಿಮೆಗೆ ಒಳಪಡಿಸಬಹುದು.

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ.2,80,000/- ಇದ್ದು, ರೈತರು ರೂ.14,000/- ಗಳ ವಿಮಾ ಕಂತಿನ ಮೊತ್ತ ಪಾವತಿಸಬೇಕು. ಮಾವು ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ.80,000/- ಇದ್ದು, ರೈತರು ರೂ.4,000/- ಗಳ ವಿಮಾ ಕಂತಿನ ಮೊತ್ತ ಪಾವತಿಸಬೇಕು. ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ.1,27,000/- ಇದ್ದು, ರೈತರು ರೂ.6,350/- ಗಳ ವಿಮಾ ಕಂತಿನ ಮೊತ್ತ ಪಾವತಿಸಬೇಕು. ಹಸಿ ಮೆಣಸಿನಕಾಯಿ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ.71,000/- ಇದ್ದು, ರೈತರು ರೂ.3,550/- ಗಳ ವಿಮಾ ಕಂತಿನ ಮೊತ್ತ ಪಾವತಿಸಬೇಕು. ಪಪ್ಪಾಯ(ಪರಂಗಿ) ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ.1,34,000/- ಇದ್ದು, ರೈತರು ರೂ.6,700/- ಗಳ ವಿಮಾ ಕಂತಿನ ಮೊತ್ತ ಪಾವತಿಸಬೇಕು.

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಈರುಳ್ಳಿ(ನೀ) ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ.80,500/- ಇದ್ದು, ರೈತರು ರೂ.4,025/- ಗಳ ವಿಮಾ ಕಂತಿನ ಮೊತ್ತ ಪಾವತಿಸಬೇಕು. ಟೊಮ್ಯಾಟೋ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ.1,41,500/- ಇದ್ದು, ರೈತರು ರೂ.7,075/- ಗಳ ವಿಮಾ ಕಂತಿನ ಮೊತ್ತ ಪಾವತಿಸಬೇಕು. ಈರುಳ್ಳಿ(ಮ.ಆ) ಬೆಳೆಗೆ ಪ್ರತಿ ಹೆಕ್ಟೇರ್‍ಗೆ ವಿಮಾ ಮೊತ್ತ ರೂ.75,750/- ಇದ್ದು, ರೈತರು ರೂ.3,788/- ಗಳ ವಿಮಾ ಕಂತಿನ ಮೊತ್ತ ಪಾವತಿಸಬೇಕು.

ವಿಮಾ ಮೊತ್ತವು ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ವಿಮೆ ಕಟ್ಟಲು ಹತ್ತಿರದ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ/ಗ್ರಾಮ ಒನ್ ಕೇಂದ್ರ/ಸಾಮಾನ್ಯ ಸೇವಾ ಕೇಂದ್ರಗಳಿಗೆ ನಿಗದಿತ ಅರ್ಜಿಗಳೊಂದಿಗೆ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಪಾಸ್‍ಪುಸ್ತಕ, ಆಧಾರ್ ಕಾರ್ಡ್ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ತಾಲ್ಲೂಕು/ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳು ಹಾಗೂ ಕೃಷಿ ಅಧಿಕಾರಿಗಳು ಅಥವಾ ಸಮೀಪದ ಯಾವುದೇ ಬ್ಯಾಂಕ್‍ಗಳಿಗೆ/ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಮತ್ತು ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande