ನವದೆಹಲಿ, 26 ಜೂನ್ (ಹಿ.ಸ.) :
ಆ್ಯಂಕರ್ : ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಅಧಿಕೃತ ಭಾಷಾ ಇಲಾಖೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿ, ಭಾರತೀಯ ಭಾಷೆಗಳು ರಾಷ್ಟ್ರವನ್ನು ಸಂಪರ್ಕಿಸುವ ಅತ್ಯಂತ ಶಕ್ತಿಶಾಲಿ ಮಾಧ್ಯಮಗಳಾಗಿವೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಆಡಳಿತದಲ್ಲಿ ಭಾರತೀಯ ಭಾಷೆಗಳ ಬಳಕೆ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ. ಸಿಎಪಿಎಫ್ ಕಾನ್ಸ್ಟೇಬಲ್ ನೇಮಕಾತಿ ಸೇರಿದಂತೆ ಹಲವು ಪರೀಕ್ಷೆಗಳು ಈಗ 13 ಭಾರತೀಯ ಭಾಷೆಗಳಲ್ಲಿ ನಡೆಯುತ್ತಿರುವುದನ್ನು ಅವರು ಉಲ್ಲೇಖಿಸಿದರು.
ನಾವು ಯಾವುದೇ ವಿದೇಶಿ ಭಾಷೆಗೆ ವಿರೋಧಿಯಾಗಿಲ್ಲ, ಆದರೆ ಸ್ವಂತ ಭಾಷೆಯಲ್ಲಿ ಯೋಚಿಸಿ ಮಾತನಾಡುವ ಮೂಲಕ ಮಾತ್ರ ಗುಲಾಮಗಿರಿಯ ಮನಸ್ಥಿತಿಯಿಂದ ಮುಕ್ತಿಯಾಗಬಹುದು, ಎಂದ ಅವರು, ಹಿಂದಿ ಎಲ್ಲ ಭಾರತೀಯ ಭಾಷೆಗಳ ಸ್ನೇಹಿತವಾಗಿದ್ದು, ಭಾಷೆಗಳ ಸಮನ್ವಯದ ಮೂಲಕ ರಾಷ್ಟ್ರದ ಏಕತೆ ಮತ್ತು ಸ್ವಾಭಿಮಾನವನ್ನು ಬೆಳೆಸಲು ಸಾಧ್ಯವಿದೆ ಎಂದು ಅಮಿತ್ ಶಾ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa