ಬಳ್ಳಾರಿ, 26 ಜೂನ್ (ಹಿ.ಸ.)
ಆ್ಯಂಕರ್: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧ ಶತಮಾನ ಎಂಬ ವಿಷಯದ ಬಗ್ಗೆ ಮೂರು ದಿನಗಳ ಅಧ್ಯಯನ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ.ಎನ್ ಅವರು ತಿಳಿಸಿದ್ದಾರೆ.
ಶಿಬಿರವು ಸೆಪ್ಟಂಬರ್ನಲ್ಲಿ ನಡೆಯಲಿದ್ದು, ರಾಜ್ಯದ ಎಲ್ಲಾ ಭಾಗದ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ.
ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ https://sahithyaacademy.karnataka.gov.in ಗೆ ಭೇಟಿ ನೀಡಿ ಅರ್ಜಿ ನಮೂನೆ ಹಾಗೂ ವಿವರ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಜೆ.ಸಿ ರಸ್ತೆಯ ಕನ್ನಡ ಭವನದ 2ನೇ ಮಹಡಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಕಚೇರಿ ಅಥವಾ ದೂ.080-22211730, 29601730, 22106460 ಗೆ ಸಂಪರ್ಕಿಸಬಹುದು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್