ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರಕುವಲ್ಲಿ ವಿಳಂಬ ಬೇಡ : ಬಿ.ಬಿ.ಅಸೂಟಿ
ಗದಗ, 26 ಜೂನ್ (ಹಿ.ಸ.) : ಆ್ಯಂಕರ್ : ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದ
ಪೋಟೋ


ಗದಗ, 26 ಜೂನ್ (ಹಿ.ಸ.) :

ಆ್ಯಂಕರ್ : ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದರು.

ಶಿರಹಟ್ಟಿಯಲ್ಲಿ ಜರುಗಿದ ಶಿರಹಟ್ಟಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕಾಳಸಂತೆಯಲ್ಲಿ ಅಕ್ಕಿ ಅಕ್ರಮವಾಗಿ ಮಾರಾಟವಾಗುತ್ತಿರುವ ಕುರಿತು ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಎಲ್ಲ ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ಅಕ್ಕಿ ಜೋಳ ವಿತರಣೆಯಾಗಬೇಕು. ಯಾವ ಬಡ ಕುಟುಂಬವೂ ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸಬೇಕು ಎಂದರು.

ಬಸ್ ನಿಲ್ದಾಣದ ಆವರಣ, ಅಲ್ಲಿನ ಶೌಚಾಲಯ ಸ್ವಚ್ಛವಾಗಿರುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು . ಯುವನಿಧಿ ಯೋಜನೆ ಸಮರ್ಪಕವಾಗಿ ಪದವಿಗಳನ್ನು ಪಡೆದ ಎಲ್ಲಾ ಯುವಕರಿಗೂ ತಲುಪಿಸಲು ಅಧಿಕಾರಿಗಳು ಪದವಿ ಹೊಂದಿದವರಿಗೆ ನೊಂದಾಯಿಸಿಕೊಳ್ಳಲು ಉತ್ತೇಜನ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾದ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದರು.

ಗೃಹಜ್ಯೋತಿ ಎಲ್ಲಾ ಕುಟುಂಬಕ್ಕೂ ಈ ಯೋಜನೆ ತಲುಪಿಸಲು ಅಧಿಕಾರಿಗಳು ಶ್ರಮವಹಿಸಬೇಕು. ಶಕ್ತಿ ಯೋಜನೆ ಎಲ್ಲ ಮಹಿಳೆಯರಿಗೆ ಪ್ರತಿಶತ ನೂರರಷ್ಟು ಉಪಯೋಗಿಸುತ್ತಿದ್ದು ಇನ್ನು ಹೆಚ್ಚಿನ ಬಸ್ಸಿನ ವ್ಯವಸ್ಥೆ ಮತ್ತು ಬಸ್ ನಿಲ್ದಾಣವನ್ನು ಸ್ವಚ್ಛವಾಗಿ ಇಡಲು ಹಾಗೂ ಅಲ್ಲಿನ ಶೌಚಾಲಯಗಳನ್ನು ಸ್ವಚ್ಛವಾಗಿಡಲು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಿರಹಟ್ಟಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ವೀರಯ್ಯ ಮಠಪತಿ ಅವರು ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ಅವುಗಳ ಸಮರ್ಪಕ ಅನುಷ್ಟಾನದ ಕುರಿತು ಪರಾಮರ್ಶೆ ನಡೆಸಬೇಕು. ಅರ್ಹರಿಗೆ ನಿಗದಿತ ಯೋಜನೆಗಳ ಸೌಲಭ್ಯ ನಿಗದಿತ , ಅವಧಿಯೊಳಗೆ ಲಭ್ಯವಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.

ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಅವರು ಮಾತನಾಡಿ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳು ದುರ್ಬಲರನ್ನು ಆರ್ಥಿಕ ಸಬಲರನ್ನಾಗಿ ಮಾಡುತ್ತಿವೆ. ಅರ್ಹರು ಯೋಜನೆಗಳಿಂದ ವಂಚಿತರಾಗದಂತೆ ಅಧಿಕಾರಿ ವಲಯ ಕ್ರಮ ವಹಿಸಬೇಕು. ಬಡವರು ಆರ್ಥಿಕ ಸ್ವಾವಲಂಬಿಗಳಾಗಿಸುವಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಪ್ರಮುಖ ಎಂದರು.

ಸಭೆಯಲ್ಲಿ ತಾಲೂಕ ಗ್ಯಾರಂಟಿ ಸಮಿತಿಯ ಸದಸ್ಯರಾದ ಶಿವನಗೌಡ ಪಾಟೀಲ. ಮಲ್ಲಪ್ಪ ಹುಯಿಲಗೊಳ. ಬುಡೇಸಾಬ ಮಕಾಂದರ್, ದೇವಪ್ಪ ಲಮಾಣಿ. ವಿಶಾಲಾ ಹೊನ್ನಣ್ಣವರ. ಸುರೇಶ್ ಕೆಂಚರಡ್ಡಿರ.ಶಕುಂತಲಾ ವಿಬೂತಿಮಠ, ಹೊನ್ನೇಶ್ ಪೋಟಿ, ಮಹಾವೀರ್ ಮಂಟಗನ. ಅಂದನಗೌಡ ಪಾಟೀಲ್, ಸೋಮನಗೌಡ ಮರಿಗೌಡರ. ಗ್ಯಾರಂಟಿ ಯೋಜನೆಗೆ ಸಂಬಂಧಿತ ಇಲಾಖೆಯ ಮುಖ್ಯಸ್ಥರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande