ಕಲಬುರಗಿ, 27 ಜೂನ್ (ಹಿ.ಸ.) :
ಆ್ಯಂಕರ್ : ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ವಿಶ್ವ ಪ್ರಸಿದ್ದಿಯಾಗಿದೆ. ಅವರ ದೂರದೃಷ್ಟಿಯಿಂದ ಬೆಂಗಳೂರು ಬೆಳೆದಿದೆ ಎಂದು ಮಹಾನಗರ ಪಾಲಿಕೆ ಮಹಾಪೌರ ಯಲಪ್ಪ ನಾಯ್ಕೋಡಿ ಅವರು ಹೇಳಿದರು.
ಶುಕ್ರವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಸಭಾಭವನದಲ್ಲಿ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಮಾತನಾಡಿದರು.
ಅವರ ಆಡಳಿತದ ಅವಧಿಯಲ್ಲಿ ಜನಪರ ಹಿತವನ್ನು ಅರಿತುಕೊಂಡು ಸಾಮಾಜಿಕವಾಗಿ ಶ್ರೇಷ್ಠ ಕಾರ್ಯಗಳನ್ನು ಮಾಡಿದ್ದಾರೆ.. ಅವರ ಅಭಿವೃದ್ದಿಯ ಕಾರ್ಯಗಳು ಇಂದಿಗೂ ಅಜರಾಮರವಾಗಿವೆ ಎಂದು ಹೇಳಿದರು.
ದಕ್ಷಿಣ ಮತ ಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ,ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಆಳ್ವಿಕೆ ನಡೆಸಿದ್ದು, ತಮ್ಮ ಪ್ರತಿಭೆ ಮತ್ತು ಜಾಣ್ಮೆಯಿಂದ ಇತಿಹಾಸದಲ್ಲಿ ಅಮರರಾಗಿದ್ದಾರೆ. ಬೆಂಗಳೂರು ನಗರವನ್ನು ಅವರು ಯೋಜಿತವಾಗಿ ನಿರ್ಮಿಸಿದರು. ರಸ್ತೆ ಮಾರುಕಟ್ಟೆ ಕೆರೆ, ದೇವಾಲಯಗಳನ್ನು ಕಟ್ಟಿಸುವ ಮೂಲಕ ಜನಜೀವನ ಸುಲವಾಗುವಂತೆ ಮಾಡಿದರು ಎಂದು ಅವರು ಹೇಳಿದರು.
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಸರ್ಕಾರ ೨೦೨೫-೨೬ರ ಸಾಲೀನ
ಆಯವ್ಯಯದಲ್ಲಿ ಘೋಷಿಸಿದಂತೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಶನವನ್ನು ೨೦೦೦ ರೂಪಾಯಿಗಳಿಂದ ೨೫೦೦, ರೂಪಾಯಿಗಳಿಗೆ ಹೆಚ್ಚಿಸಿ ೩೨, ಕೋಟಿ ರೂಪಾಯಿಗಳ ಅನುದಾನ ಒದಗಿಸಿ ಆದೇಶ ಹೊರಡಿಸಿರುತ್ತಾರೆ. ನುಡಿದಂತೆ ನಡೆದ ಮುಖ್ಯ ಮಂತ್ರಿಯವರಿಗೆ ನಾಡಿನ ಕಲಾವಿದರ ಪರವಾಗಿ ಅವರು ಧನ್ಯವಾದ ಹೇಳಿದರು.
ವಿಶ್ವಾನಾಥ ಕಲ್ಲಾ ಅರಣಕಲ್ ಅವರು ಕೆಂಪೇಗೌಡರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಕೆಂಪೇಗೌಡರು ೧೫೧೦ ರಲ್ಲಿ ಜನಿಸಿದರು.ಇವರ ಆರ್ದಶ ತತ್ವಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಹಾಗೂ ನಮ್ಮ ನಿಜ ಜೀವನದಲ್ಲಿ ಆಳವಡಿಸಿಕೊಳ್ಳಬೇಕೆಂದು ಅವರ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
ಕಲಬುರಗಿ ಜಿಲ್ಲಾ ಕುಡ ಒಕ್ಕಲಿಗ ಅಭಿವೃದ್ಧಿ ಜಿಲ್ಲಾಧ್ಯಕ್ಷ ಶಿವಯೋಗಪ್ಪ ಜಿ ಚಿತ್ತಾಪೂರ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಮಾಜಿಕ ಭದ್ರತಾ ಯೋಜನೆ ಮತ್ತು ಪಿಂಚಣೆ ಶಾಖೆಯ ಸಹಾಯಕ ನಿರ್ದೇಶಕ ಶಿವಶರಣಪ್ಪ ಎ ದನ್ನಿ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು, ಕುಡ ಒಕ್ಕಲಿಗ ರಾಜ್ಯದ್ಯಕ್ಷರಾದ ಶಿವರಾಜ ಪಾಟೀಲ್ ಕುಲಗುರ್ತಿ, ಗೌರಾವಾದ್ಯಕ್ಷ ಬಸವರಾಜ ಸರಡಗಿ, ಸೇರಿದಂತೆ ಅಧಿಕಾರಿಗಳು ಸಮಾಜ ಮುಖಂಡರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಪ್ರಿಯಾಂಕಾ ಹೊಸಮನಿ