ಹುಲಿಗಳ ಸಾವು ಪ್ರಕರಣ ;ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ : ಖಂಡ್ರೆ
ಚಾಮರಾಜನಗರ, 27 ಜೂನ್ (ಹಿ.ಸ.) : ಆ್ಯಂಕರ್ : ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯದಲ್ಲಿ ಸಂಭವಿಸಿದ ಐದು ಹುಲಿಗಳ ಸಾವಿನ ಘಟನೆ ಅತೀವ ನೋವು ತಂದಿದೆ. ಒಂದು ದಿನದಲ್ಲೇ 5 ಹುಲಿಗಳು ಸಾವಿಗೀಡಾಗಿರುವುದು ಹೃದಯ ವಿದ್ರಾವಕ ಘಟನೆ. ಈ ದುರ್ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರ
Khandre


ಚಾಮರಾಜನಗರ, 27 ಜೂನ್ (ಹಿ.ಸ.) :

ಆ್ಯಂಕರ್ : ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯದಲ್ಲಿ ಸಂಭವಿಸಿದ ಐದು ಹುಲಿಗಳ ಸಾವಿನ ಘಟನೆ ಅತೀವ ನೋವು ತಂದಿದೆ. ಒಂದು ದಿನದಲ್ಲೇ 5 ಹುಲಿಗಳು ಸಾವಿಗೀಡಾಗಿರುವುದು ಹೃದಯ ವಿದ್ರಾವಕ ಘಟನೆ. ಈ ದುರ್ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಘಟನೆ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಷಪ್ರಾಶನದಿಂದ ಸಾವನ್ನಪ್ಪಿದ್ದ ಲಕ್ಷಣಗಳು ತಜ್ಞರಿಂದ ವ್ಯಕ್ತವಾಗಿವೆ. ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರದ ಅಧಿಕಾರಿಗಳು, ವನ್ಯಜೀವಿ ತಜ್ಞರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

ಉನ್ನತ ಮಟ್ಟದ ತನಿಖೆಗೆ ಈಗಾಗಲೇ ಆದೇಶ ನೀಡಲಾಗಿದೆ. ಮರಣೋತ್ತರ ಪರೀಕ್ಷೆ ನೆರವೇರಿದ್ದು, ಪ್ರೋಟೋಕಾಲ್ ಪ್ರಕಾರ ಹುಲಿಗಳ ಅಂತಿಮ ಸಂಸ್ಕಾರವೂ ಆಗಿದೆ. ವರದಿ ಬಂದ ಬಳಿಕ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande