ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ : ಡಿ.ಕೆ. ಶಿವಕುಮಾರ್
ಬೆಂಗಳೂರು, 29 ಜೂನ್ (ಹಿ.ಸ.) : ಆ್ಯಂಕರ್ : ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದ ಅವರು, ಕಾವೇರಿ ಆರತಿ
ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ : ಡಿ.ಕೆ. ಶಿವಕುಮಾರ್


ಬೆಂಗಳೂರು, 29 ಜೂನ್ (ಹಿ.ಸ.) :

ಆ್ಯಂಕರ್ : ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande