ಧಾರವಾಡ, 29 ಜೂನ್ (ಹಿ.ಸ.) :
ಆ್ಯಂಕರ್ : ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ, ಆ ಬಗ್ಗೆ ಬಿಜೆಪಿಯವರು ಚರ್ಚೆಗೆ ಸಿದ್ದವಿದ್ದಾರಾ ಎಂದು ಸಚಿವ ಸಂತೋಷ ಲಾಡ್ ಸವಾಲು ಹಾಕಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಪಹಲ್ಗಾಮ್, ಪುಲ್ವಾಮಾ ದಾಳಿ ಕುರಿತು ಕೇಳಬಾರದು ಎಂದು ಅವರು ಇಂಥ ಅಭಿಯಾನಗಳನ್ನು ತರುತ್ತಿದ್ದಾರೆ. ವಿಷಯಾಧಾರಿತ ಸಮಸ್ಯೆಗಳು ಜನರಿಗೆ ಗೊತ್ತಾಗಬಾರದೆಂಬುದು ಇವರ ಉದ್ದೇಶ ಎಂದು ಸಂತೋಷ್ ಲಾಡ್ ಹರಿಹಾಯ್ದಿದ್ದು, ತುರ್ತು ಪರಿಸ್ಥಿತಿ ಚರ್ಚೆ ಈಗ ಪ್ರಸ್ತುತವೇ, ಚರ್ಚಿಸುವ ವಿಷಯವೇ, ಎಂದು ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa